Monday, July 28, 2025
Homeರಾಜಕೀಯ | Politicsಮಜಾವಾದಿ ಸಿದ್ದರಾಮಯ್ಯ ಅಹಿಂದ ಸಮುದಾಯಕ್ಕೆ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು : ಜೆಡಿಎಸ್

ಮಜಾವಾದಿ ಸಿದ್ದರಾಮಯ್ಯ ಅಹಿಂದ ಸಮುದಾಯಕ್ಕೆ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು : ಜೆಡಿಎಸ್

JDS Attack on CM Siddaramaiah

ಬೆಂಗಳೂರು,ಜು.28- ದಲಿತರನ್ನು ಕೇವಲ ಮತಬ್ಯಾಂಕ್‌ ಆಗಿ ಬಳಸಿಕೊಳ್ಳುತ್ತಲೇ ಬಂದಿರುವ ರಾಜ್ಯ ಕಾಂಗ್ರೆಸ್‌‍ ಪಕ್ಷ ಮತ್ತೆ ದಲಿತರ ಬೆನ್ನಿಗೆ ಚೂರಿ ಹಾಕಿದೆ ಎಂದು ಜೆಡಿಎಸ್‌‍ ಆರೋಪಿಸಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌‍ ಮಜಾವಾದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ಸಮುದಾಯಕ್ಕೆ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು ಎಂದು ಟೀಕಿಸಿದೆ.

ದಲಿತ ವಿರೋಧಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನಲ್ಲಿ ಎಸ್‌‍ ಸಿ ಎಸ್‌‍ ಪಿ/ ಟಿಎಸ್‌‍ ಪಿ ಕಾರ್ಯಕ್ರಮಗಳಿಗೆ ಮೀಸಲಿಟ್ಟಿದ್ದ 42,017.51 ಕೋಟಿ ರೂ.ನಲ್ಲಿ 11,896.84 ಕೋಟಿ ರೂ.ವನ್ನು ಗ್ಯಾರಂಟಿ ಯೋಜನೆಗೆ ಹಂಚಿಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.

ಪರಿಶಿಷ್ಟರ ಎಸ್‌‍ ಸಿ ಎಸ್‌‍ ಪಿ/ ಟಿಎಸ್‌‍ ಪಿ ಹಣಕ್ಕೆ ಕನ್ನ ಹಾಕಿದ ಸಿದ್ದರಾಮಯ್ಯ ಎಂದು ಆಪಾದಿಸಿರುವ ಜೆಡಿಎಸ್‌‍, 2025-26ನೇ ಸಾಲಿನಲ್ಲಿ 11,896.84 ಕೋಟಿ ರೂ., 2024-25ನೇ ಸಾಲಿನಲ್ಲಿ 14.282.38 ಕೋಟಿ ರೂ., 2023-24ನೇ ಸಾಲಿನಲ್ಲಿ 11,114 ಕೋಟಿ ರೂ.ಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ಸಾವಿರಾರು ಕೋಟಿ ಹಣವನ್ನ ಅವೈಜ್ಞಾನಿಕ ಗ್ಯಾರಂಟಿಗಳಿಗೆ ದುರುಪಯೋಗ ಮಾಡುತ್ತಿದೆ. ಕಾಂಗ್ರೆಸ್‌‍ ಸರ್ಕಾರ ಮತ್ತೊಮೆ ದಲಿತರಿಗೆ ದ್ರೋಹ ಮಾಡುತ್ತಿದೆ ಎಂದು ಹೇಳಿದೆ.

RELATED ARTICLES

Latest News