Monday, October 7, 2024
Homeರಾಷ್ಟ್ರೀಯ | Nationalಮುಡಾರಾಮಯ್ಯ ಸದಾರಮೆ ನಾಟಕ ಶುರು : ಜೆಡಿಎಸ್‌‍ ಲೇವಡಿ

ಮುಡಾರಾಮಯ್ಯ ಸದಾರಮೆ ನಾಟಕ ಶುರು : ಜೆಡಿಎಸ್‌‍ ಲೇವಡಿ

ಬೆಂಗಳೂರು,ಅ.7- ನಿಮ್ಮ ಕಾಂಗ್ರೆಸ್‌‍ ಪಕ್ಷ ಸೂಚನೆಗೂ ಮೊದಲೇ ತಾವೇ ರಾಜೀನಾಮೆ ಕೊಟ್ಟು ಮರ್ಯಾದೆ ಉಳಿಸಿಕೊಳ್ಳಿ ಎಂದು ಜೆಡಿಎಸ್‌‍ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದೆ. ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌‍ ಮುಡಾವನ್ನು ಮುಕ್ಕಿ ತಿಂದಿರುವ ಮುಡಾರಾಮಯ್ಯ ತಮ್ಮ ಅಕ್ರಮಗಳು ಹೊರಬರುತ್ತಿದ್ದಂತೆ ರಾಜ್ಯದ ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಹೊಸ ಸದಾರಮೆ ನಾಟಕ ಶುರು ಮಾಡಿದ್ದಾರೆ ಎಂದು ಟೀಕಿಸಿದೆ.

ಕಾಂಗ್ರೆಸ್‌‍ ಮಾಡಿದ್ದ ಪೋಸ್ಟ್‌ಗೆ ಪ್ರತಿಯಾಗಿ ಪೋಸ್ಟ್‌ ಮಾಡಿರುವ ಜೆಡಿಎಸ್‌‍, ಸಿದ್ದರಾಮಯ್ಯನವರ ಧರ್ಮಪತ್ನಿಯವರು ಯಾವುದೇ ತಪ್ಪು ಮಾಡಿಲ್ಲ. ಆದರೆ, ಪತ್ನಿ ಹೆಸರಲ್ಲಿ ಅಕ್ರಮವಾಗಿ ಸೈಟು ಕಬಳಿಸಿದ ಸಿದ್ಧಹಸ್ತರು. ಮುಡಾ ಫೈಲ್‌್ಸನ ಕಥೆ, ಚಿತ್ರ ಕಥೆ, ನಿರ್ದೇಶನ ತಮದೇ ಅಲ್ಲವೇ? ಎಂದು ಪ್ರಶ್ನಿಸಿದೆ.

ಗೌರವಯುತವಾಗಿ ಮನೆಯಲ್ಲಿರುವ, ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಆ ತಾಯಿಯ ಹೆಸರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ನಿವೇಶನ ವಿಚಾರದಲ್ಲಿ ಈಗ ಮೊಸಳೆ ಕಣ್ಣೀರು ಸುರಿಸಲು ನಾಚೀಕೆಯಾಗುವುದಿಲ್ಲವೇ? ಎಂದು ಛೇಡಿಸಿದೆ. ದಲಿತರನ್ನು ಬಳಸಿಕೊಂಡು ಬಲಿತಿರುವ ನೀವು ವಾಲೀಕಿ ನಿಗಮದ ಹಣವನ್ನು ಹೇಗೆಲ್ಲ ಲೂಟಿ ಮಾಡಿದ್ದೀರಿ?, ದಲಿತರ ಜಮೀನು ನುಂಗಿದ್ದೀರಿ, ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಸಾವಿರಾರು ಕೋಟಿ ದುರ್ಬಳಕೆ ಮಾಡಿಕೊಂಡ ಭ್ರಷ್ಟಾತಿಭ್ರಷ್ಟ ಸರ್ಕಾರ ನಿಮದು. ಹೆಜ್ಜೆ ಹೆಜ್ಜೆಗೂ ದಲಿತರ ಬೆನ್ನಿಗೆ ಚೂರಿ ಹಾಕುತ್ತಲೇ ಇರುವ ನಿಮಗೆ ದಲಿತರ ಬಗ್ಗೆ ಮಾತಾಡುವ ಯಾವ ನೈತಿಕತೆಯು ಉಳಿದಿಲ್ಲ ಎಂದು ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದೆ.

ಎ1 ಆರೋಪಿ ಭ್ರಷ್ಟರಾಮಯ್ಯ ಅಲುಗಾಡುತ್ತಿರುವ ಸಿಎಂ ಕುರ್ಚಿ ಉಳಿಸಿಕೊಳ್ಳಲು ಹಾಗೂ ಜನರ ಅನುಕಂಪ ಪಡೆಯಲು ಮಾಡುತ್ತಿರುವ ಹೈಡ್ರಾಮಾಗಳಷ್ಟೇ ಎಂದು ಜೆಡಿಎಸ್‌‍ ಲೇವಡಿ ಮಾಡಿದೆ.

RELATED ARTICLES

Latest News