ಡಿ 15ರಿಂದ ಪಂಚರತ್ನ ಯಾತ್ರೆ ಮತ್ತೆ ಪ್ರಾರಂಭ

Social Share

ಬೆಂಗಳೂರು, ಡಿ.12- ಮಳೆ ಯಿಂದಾಗಿ ಮುಂದೂಡಲಾಗಿದ್ದ ಮೊದಲ ಹಂತದ ಜೆಡಿಎಸ್‍ನ ಪಂಚರತ್ನ ರಥಯಾತ್ರೆಯು ಡಿ.15ರಿಂದ ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರದಿಂದ ಮತ್ತೆ ಪ್ರಾರಂಭವಾಗಲಿದೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ರಥಯಾತ್ರೆಗೆ ಪಕ್ಷದ ಬೇರೆ ಕಾರ್ಯಕ್ರಮಗಳ ಹಿನ್ನಲೆಯಲ್ಲಿ ಡಿ.7ರಿಂದ 10ರವರೆಗೆ ಬಿಡುವು ನೀಡಲಾಗಿತ್ತು. ಪೂರ್ವ ನಿಗದಿಯಂತೆ ನಿನ್ನೆಯಿಂದ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಪ್ರಾರಂಭವಾಗಬೇಕಿತ್ತು.

ನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಬೇಕಿತ್ತು. ಆದರೆ, ರಾಜ್ಯದಲ್ಲಿ ಶುಕ್ರವಾರದಿಂದ ಜಿಟಿಜಿಟಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪುನಾರಂಭವಾಗ ಬೇಕಿದ್ದ ಪಂಚರತ್ನ ರಥಯಾತ್ರೆ ಯನ್ನು ನಾಲ್ಕು ದಿನಗಳ ಕಾಲ ಕುಮಾರಸ್ವಾಮಿ ಮುಂದೂಡಿದ್ದು, ಪಂಚರತ್ನ ರಥಯಾತ್ರೆಯ ಮಾರ್ಗ ಹಾಗೂ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದಾರೆ.

ಕೆ.ಆರ್.ಪುರ ಶೂಟ್‍ಔಟ್ ಪ್ರಕರಣ: 3 ದಿನದ ಹಿಂದೆಯೇ ಹತ್ಯೆಗೆ ಸ್ಕೆಚ್

ಡಿಸೆಂಬರ್ 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.

ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದ್ದು, 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.

ಬಾಲಕಿಗೆ ಲೈಂಗಿಕ ದೌರ್ಜನ್ಯ: ವೃದ್ಧನ ಹೊಡೆದು ಕೊಂದ ಜನ

ಡಿ.27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ. ಬಳಿಕ ಪಂಚರತ್ನರಥಯಾತ್ರೆಯ ಎರಡನೇ ಹಂತ ಪ್ರಾರಂಭ ವಾಗಲಿದೆ.

jds, Pancharatna Yatra, starts, Ramanagara,

Articles You Might Like

Share This Article