Sunday, May 5, 2024
Homeರಾಜಕೀಯಕಾಂಗ್ರೆಸ್ ಸೇರಿದ ಕಾರ್ಯಕರ್ತರು, ಜೆಡಿಎಸ್ ಪ್ರತಿಕ್ರಿಯೆ ಏನು..?

ಕಾಂಗ್ರೆಸ್ ಸೇರಿದ ಕಾರ್ಯಕರ್ತರು, ಜೆಡಿಎಸ್ ಪ್ರತಿಕ್ರಿಯೆ ಏನು..?

ಬೆಂಗಳೂರು,ಏ.12- ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿ ಹಾಗೂ ಹತಾಶೆಯಿಂದ ಯುವಕಾಂಗ್ರೆಸ್ ಕಾರ್ಯಕರ್ತರನ್ನೇ ಜೆಡಿಎಸ್ ಕಾರ್ಯಕರ್ತರೆಂದು ಬಿಂಬಿಸಿ ಪಕ್ಷ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಯುವಕಾಂಗ್ರೆಸ್ ಕಾರ್ಯಕರ್ತರಿಗೆ ಕಾಂಗ್ರೆಸ್ ಶಾಲು ಹಾಕಿ ಅವರನ್ನು ಜೆಡಿಎಸ್ ಕಾರ್ಯಕರ್ತರೆಂದು ಬಿಂಬಿಸಿದೆ. ಅವರೆಲ್ಲಾ ಕಾಂಗ್ರೆಸ್ ಸೇರಿದ್ದಾರೆಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಟೀಕಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ರವರಿಗೆ ಸೋಲಿನ ಭೀತಿ ಎಷ್ಟರ ಮಟ್ಟಿಗೆ ಕಾಡುತ್ತಿದೆ ಎಂಬುದಕ್ಕೆ ಇದು ನಿದರ್ಶನ. ಸೋಲಿನ ಭೀತಿ, ಹತಾಶೆ ಎಂತೆಂತಹ ಗಿಮಿಕ್‍ಗಳನ್ನು ಮಾಡಿಸುತ್ತದೆ ಎಂಬುದಕ್ಕೆ ಇದು ಜೀವಂತ ಸಾಕ್ಷಿ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

RELATED ARTICLES

Latest News