Sunday, May 19, 2024
Homeರಾಷ್ಟ್ರೀಯಜಾರ್ಖಂಡ್‌ : ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಸಚಿವ ಅಲಂಗೀರ್‌ ಆಲಂ ಆಪ್ತನ ಸೆರೆ

ಜಾರ್ಖಂಡ್‌ : ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಸಚಿವ ಅಲಂಗೀರ್‌ ಆಲಂ ಆಪ್ತನ ಸೆರೆ

ರಾಂಚಿ,ಮೇ7- ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ ಮತ್ತು ಅವರ ಮನೆಕೆಲಸಗಾರ ಜಹಾಂಗೀರ್‌ ಆಲಂ ಅವರನ್ನು ಜಾರಿನಿರ್ದೇಶನಾಲಯ ತಡರಾತ್ರಿ ಬಂಧಿಸಿದೆ.

ದಾಳಿ ವೇಳೆ ಸಿಕ್ಕ 35 ಕೋಟಿ ರೂ.ಗಳಷ್ಟು ನಗದನ್ನು ವಶಪಡಿಸಿಕೊಳ್ಳಲಾಗಿದೆ. ಸಂಜೀವ್‌ ಲಾಲ್‌ ಮತ್ತು ಜಹಾಂಗೀರ್‌ ಆಲಂ ಇಬ್ಬರನ್ನೂ ರಾತ್ರಿಯಿಡೀ ವಿಚಾರಣೆ ನಡೆಸಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸೋಮವಾರ ಇಡಿ ಅಧಿಕಾರಿಗಳ ತಂಡ ರಾಂಚಿಯ ವಿವಿಧೆಡೆ ದಾಳಿ ನಡೆಸಿತ್ತು. ಈ ವೇಳೆ ಗ್ರಾಮೀಣಾಭಿವೃದ್ಧಿ ಮಂತ್ರಿಯೂ ಆಗಿರುವ ಕಾಂಗ್ರೆಸ್‌ ಮುಖಂಡ ಆಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ ಸಹಾಯಕನ ಮನೆಯಲ್ಲಿ ಈ ದುಡ್ಡಿನ ರಾಶಿ ಕಂಡುಬಂದಿತ್ತು.

ಯಾವುದೇ ದಾಖಲೆಗಳನ್ನು ಒಳಗೊಂಡಿರದ ಈ ಹಣವನ್ನು 12 ಗಂಟೆಗಳ ಕಾಲ 6 ಮಷಿನ್‌ಗಳ ಮೂಲಕ ಅಧಿಕಾರಿಗಳು ಎಣಿಕೆ ಮಾಡಿದ್ದರು. ಸತತ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು 32 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದರು. ಇದೇ ವೇಳೆ ಕೇಂದ್ರಿಯ ತನಿಖಾ ದಳ ನಡೆಸಿದ್ದ ದಾಳಿಯಲ್ಲೂ 3 ಕೋಟಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಮೋದಿ ಹೇಳಿದ್ದೇನು?:
ಜಾರ್ಖಂಡ್‌ನಲ್ಲಿ ದುಡ್ಡಿನ ಪರ್ವತವೇ ಪತ್ತೆಯಾಗಿದೆ. ಇದು ಜನರಿಂದ ಲೂಟಿ ಹೊಡೆದ ಹಣ. ಭ್ರಷ್ಟಾಚಾರದ ವಿರುದ್ಧ ಮೋದಿ ಕ್ರಮ ತಗೋತಾರೆ ಅನ್ನೊದಕ್ಕೇ ಇದೆ ಸಾಕ್ಷಿ. ಆದರೆ ಇದಕ್ಕೂ ತಮಗೂ ಸಂಬಂಧವೇ ಇಲ್ಲ ಎಂದು ಆಲಂಗೀರ್‌ ಸ್ಪಷ್ಟಪಡಿಸಿದ್ದಾರೆ. ಸಂಜೀವ್‌ ಲಾಲ್‌ ಸರ್ಕಾರ ಒದಗಿಸಿದ್ದ ಆಪ್ತ ಕಾರ್ಯದರ್ಶಿ ಅಷ್ಟೇ. ತಪ್ಪು ಮಾಡಿದವರ ವಿರುದ್ಧ ಕ್ರಮ ಆಗಲಿ ಎಂದಿದ್ದಾರೆ ಎಂದು ಖಡಕ್ಕಾಗಿ ಪ್ರತಿಕ್ರಿಯಿಸಿದ್ದಾರೆ.

RELATED ARTICLES

Latest News