ನವದೆಹಲಿ, ಮೇ 14 (ಪಿಟಿಐ) : ನ್ಯಾಯವಾದಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಇಂದು ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಗವಾಯಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನಿನ್ನೆ ನಿವೃತ್ತರಾಗಿದ್ದು, ಅವರ ಸ್ಥಾನವನ್ನು ಗವಾಯಿ ಅವರು ತುಂಬಿದ್ದಾರೆ. 2019 ರ ಮೇ 24ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಗವಾಯಿ ಅವರು ಆರು ತಿಂಗಳ ಹೆಚ್ಚು ಅವಧಿಯನ್ನು ಹೊಂದಿದ್ದು, ನವೆಂಬರ್ ತಿಂಗಳಿನವರೆಗೆ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.