ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ..!

ಬೆಂಗಳೂರು, ಏ.16- ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (81) ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.1942ರ ಆಗಸ್ಟ್ 19ರಂದು ಶಾಮರಾವ್-ಜಯಮ್ಮ ದಂಪತಿ ಪುತ್ರನಾಗಿ ಮೈಸೂರಿನ ಹುಣಸೂರಿನಲ್ಲಿ ಜನಿಸಿದ ಅವರು 1963ರಲ್ಲಿ ಅಧಿಕೃತವಾಗಿ ಕನ್ನಡ ಚಿತ್ರರಂಗಕ್ಕೆ ಬಂದಿದ್ದರು. 1966ರಲ್ಲಿ ಡಾ.ರಾಜ್‍ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಚಿತ್ರವನ್ನು ನಿರ್ಮಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ಅಧ್ಯಾಯ ಬರೆದಿದ್ದರು. ಚಿತ್ರರಂಗದಲ್ಲಿ ಅವರು ಹಲವಾರು ಏಳುಬೀಳುಗಳನ್ನು ಕಂಡು ದಾಖಲೆಗಳನ್ನೇ ನಿರ್ಮಿಸಿದ್ದರು. ಇಂದು ಬೆಳಗ್ಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ … Continue reading ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ..!