Friday, May 30, 2025
Homeರಾಜ್ಯನಟ ಕಮಲ್‌ ಹಾಸನ್‌ ವಿರುದ್ಧ ಕನ್ನಡಿಗರ ಆಕ್ರೋಶ

ನಟ ಕಮಲ್‌ ಹಾಸನ್‌ ವಿರುದ್ಧ ಕನ್ನಡಿಗರ ಆಕ್ರೋಶ

Kannadigas' anger against actor Kamal Haasan

ಬೆಂಗಳೂರು, ಮೇ 28- ಥಗ್‌ ಲೈಫ್‌ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ ಸಂದರ್ಭ ದಲ್ಲಿ ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ವಿವದತ್ಮಾಕ ಹೇಳಿಕೆ ನೀಡಿ ಸ್ವಾಭಿಮಾನಿ ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿರುವ ದಕ್ಷಣ ಭಾರತದ ಹೆಸರಾಂತ ಚಿತನಟ ಕಮಲ್‌ ಹಾಸನ್‌ ಕೂಡಲೇ ಬೇಷರತ್‌ ಕ್ಷಮೆ ಕೇಳಬೇಕು ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಪ್ರತಿಪಕ್ಷ ಬಿಜೆಪಿ, ಕರವೇ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ಮತ್ತಿತರ ಸಂಘಟನೆಗಳು ಕಮಲ್‌ ಹಾಸನ್‌ ಕೂಡಲೇ ಕ್ಷಮೆ ಕೇಳದಿದ್ದರೆ,

ಕರ್ನಾಟಕದಲ್ಲಿ ಅವರ ಯಾವುದೇ ಚಿತ್ರಗಳ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟಿವೆ. ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಮಾತನಾಡಿದ್ದ ಕಮಲ್‌ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಕ್ಷಮೆ ಯಾಚಿಸುವಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಕನ್ನಡ ಭಾಷೆಗೆ 4ರಿಂದ 5 ಸಾವಿರ ವರ್ಷಗಳ ಇತಿಹಾಸವಿದೆ. ಅವರು ಆಡಿದ ಮಾತಿನಿಂದ ದ್ರಾವಿಡ ಭಾಷೆಗಳು ಒಗ್ಗಟ್ಟಿಗೆ ದಕ್ಕೆಯಾಗಿದೆ. ಕಮಲ್‌ ಅತ್ಯುತ್ತಮ ಕಲಾವಿದ, ಅವರು ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ. ನಟನ ಮಾತಿನಿಂದ ಕನ್ನಡಿಗರು, ತಮಿಳರ ನಡುವೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ.

ತಕ್ಷಣ ತಮ ತಪ್ಪನ್ನು ಅವರು ತಿದ್ದುಕೊಂಡು ಕನ್ನಡಿಗರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಕ್ಷಮೆಯಾಚಿಸದಿದ್ದರೆ ಱಥಗ್‌ ಲೈಫ್‌‍ಚಿತ್ರದ ರಿಲೀಸ್‌‍ಗೆ ತಡೆ ನೀಡೋದಾಗಿ ಕರವೇ ಮತ್ತು ಕನ್ನಡಪರ ಸಂಘಟನೆ ಎಚ್ಚರಿಸಿದೆ. ಕಮಲ್‌ ಆಡಿರುವ ಮಾತುಗಳು ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್‌ಯಕ್ತವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಕಮಲ್‌ ಹಾಸನ್‌ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ, ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್‌ ಹಾಸನ್‌ ತಮ್ಮ ತಮಿಳು ಭಾಷೆಯನ್ನು ವೈಭವಿಕರಿಸುವ ಮತ್ತಿನಲ್ಲಿ ನಟ ಶಿವರಾಜ್‌ ಕುಮಾರ್‌ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಭಾರತವೂ ಸೇರಿದಂತೆ ವಿಶ್ವದ ಹತ್ತು -ಹಲವು ಕಡೆಗಳಲ್ಲಿ ಕನ್ನಡದ ಹೆಗ್ಗುರುತು ಶತಾಶತಮಾನಗಳಿಂದಲೂ ಪಡಿಮೂಡಿದೆ. ಜಗತ್ತಿನ ಭಾಷೆಗಳಲ್ಲಿ ಕನ್ನಡಕ್ಕೆ ಸರ್ವ ಶ್ರೇಷ್ಠ ಮಾನ್ಯತೆ ಇದೆ ಎಂಬ ಕನಿಷ್ಠ ತಿಳುವಳಿಕೆ ಕಮಲ್‌ ಹಾಸನ್‌ ರಂತಹ ಸಂಕುಚಿತ ವ್‌ಯಕ್ತಿತ್ವವಿರುವ ದುರಾಭಿಮಾನಿ ವ್‌ಯಕ್ತಿಗಳಿಗೆ ತಿಳಿದಿರಲಿ. ಕನ್ನಡವನ್ನು ಅವಹೇಳನ ಮಾಡುವ ಮುನ್ನ ಕನ್ನಡ ಚಿತ್ರಗಳಲ್ಲೂ ನಟಿಸಿರುವ ಕಮಲ್‌ ಹಾಸನ್‌ ಕನ್ನಡ, ಕನ್ನಡಿಗರ ಋಣ ತಮ್ಮ ಮೇಲಿದೆ ಎಂಬ ಔದಾರ್ಯತೆಯನ್ನು ಮರೆತಿದ್ದು ಅವರ ಉಪಕಾರ ಸ್ಮರಣೆಯಿಲ್ಲದ ವ್‌ಯಕ್ತಿತ್ವವನ್ನು ಅನಾವರಣಗೊಳಿಸಿದೆ.

ದಕ್ಷಿಣ ಭಾರತದಲ್ಲಿ ಸಾಮರಸ್ಯತೆಯನ್ನು ಬೆಸೆಯಬೇಕಾದ ಕಮಲ್‌ ಹಾಸನ್‌ ಅವರು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಾ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುತ್ತಿದ್ದರು. ಇದೀಗ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಕೊಳ್ಳಿಯಿಟ್ಟು ಕನ್ನಡವನ್ನು ಅಪಮಾನಿಸಿದ್ದಾರೆ. ಈ ಕೂಡಲೇ ಕಮಲ್‌ ಹಾಸನ್‌ ಅವರು ಈ ಕೂಡಲೇ ಬೇಷರತ್‌ ಕನ್ನಡಿಗರ ಕ್ಷಮೆ ಕೇಳಬೇಕು.

ಯಾವ ಭಾಷೆಯಿಂದ ಯಾವ ಭಾಷೆ ಹುಟ್ಟಿತು ಎಂಬುದನ್ನು ವ್ಯಾಖ್ಯಾನಿಸಲು ಕಮಲ್‌ ಹಾಸನ್‌ ಇತಿಹಾಸ ತಜ್ಞರೇನೂ ಅಲ್ಲ. ಆದರೆ, ಎರಡೂವರೆ ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಇರುವ ಕನ್ನಡ ಭಾಷೆ ಭಾರತದ ಭೂಪಟದಲ್ಲಿ ಸಮೃದ್ಧತೆಯನ್ನು ಸಂಕೇತಿಸುತ್ತದೆ, ಸೌಹಾರ್ದತೆಯನ್ನು ಪ್ರತಿನಿಧಿಸುತ್ತಿದೆ. ಕನ್ನಡಿಗರು ಭಾಷಾ ದ್ವೇಷಿಗಳಲ್ಲ, ಆದರೆ ಕನ್ನಡ ನಾಡು, ನುಡಿ, ಜನ, ಜಲ, ವಿಚಾರಗಳು ಬಂದಾಗ ಸ್ವಾಭಿಮಾನವನ್ನು ಎಂದಿಗೂ ಬಲಿ ಕೊಟ್ಟಿಲ್ಲ ಎಂಬ ಸತ್ಯ ವಿವೇಕ ಸುಟ್ಟುಕೊಂಡವರಂತೆ ಮಾತನಾಡಿರುವ ಕಮಲ್‌ ಹಾಸನ್‌ ಅವರಿಗೆ ನೆನಪಿರಲಿ ಎಂದು ತಿಳಿಸಿದ್ದಾರೆ.

ಕಮಲ್‌ ಹಾಸನ್‌ ಒಬ್ಬ ಹುಚ್ಚ:
ತಮಿಳು ಭಾಷೆಯಿಂದಲೇ ಕನ್ನಡ ಭಾಷೆ ಹುಟ್ಟಿದ್ದು ಎಂಬ ನಟ ಕಮಲ್‌ ಹಾಸನ್‌ ಹೇಳಿಕೆಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಆಶೋಕ್‌ ಕೆಂಡಮಂಡಲವಾಗಿದ್ದಾರೆ. ಅವನೊಬ್ಬ ತಲೆ ತಿರುಕ, ಹುಚ್ಚ, ಅವನಿಗೆ ಕನ್ನಡ ಸಿನಿಮಾದಲ್ಲಿ ನಮ್ಮ ನಿರ್ಮಾಪಕರು ಅವಕಾಶ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಅದರ ಋಣ ತೀರಿಸುವ ಕೆಲಸ ಮಾಡಬೇಕಿತ್ತು.ಆದರೆ ಕನ್ನಡದ ಬಗ್ಗೆ ಅವಹೇಳನ ಮಾತಾಡಿದ್ದಾನೆ.ಅವನೊಬ್ಬ ನಗರದ ನಕ್ಸಲ್‌ ಎಂದು ಏಕವಚನದಲ್ಲೇ ವಾಗ್ದಳಿ ನಡೆಸಿದ್ದಾರೆ. ಅವನನ್ನ ಕರ್ನಾಟಕಕ್ಕೆ ಬರಲು ಬಿಡಬಾರದು. ಅವನ ಎಲ್ಲಾ ಸಿನಿಮಾಗಳನ್ನ ಬಹಿಷ್ಕಾರ ಹಾಕಬೇಕು.ಈ ಕುರಿತು ಸರ್ಕಾರ ಮತ್ತು ಕನ್ನಡಪರ ಸಂಘಟನೆಗೆ ಮನವಿ ಮಾಡುತ್ತೇನೆ ಎಂದು ಕಿಡಿಕಾರಿದರು.

ಈ ಕುರಿತು ತಮ್ಮ ಸಾಮಾಜಿಕ ಜಾಲ ತಾಣದಲ್ಲೂ ಕಮಲ್‌ ಹಾಸನ್‌ ವಿರುದ್ದ ಪೋಸ್ಟ್‌ ಮಡಿರುವ ಆಶೋಕ್‌, ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ ಎನ್ನುವ ನಿರರ್ಥಕ ಮಾತುಗಳಿಂದ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟು ಮಾಡಿರುವ ದಕ್ಷಣ ಭಾರತದ ಖ್ಯಾತ ನಟ ಕಮಲ್‌ ಹಾಸನ್‌ ಅವರಿಗೆ ಕಿವಿ ಹಿಂಡಿಸಿ ಇನ್ನೆಂದೂ ಕನ್ನಡ ನಾಡು-ನುಡಿಯ ತಂಟೆಗೆ ಬರದಂತೆ ಎಚ್ಚರಿಕೆ ಕೊಡಿಸಬಹುದೇ? ಎಂದು ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಕಮಲ್‌ ಹಾಸನ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಅವರ ಮಿತ್ರ ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಸ್ಟಾಲಿನ್‌ ಅವರಿಗೆ ಪರಮಾಪ್ತರು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ರಾಹುಲ್‌ ಗಾಂಧಿ ಹಾಗೂ ಸ್ಟಾಲಿನ್‌ ಅವರ ಮೂಲಕ ಕಮಲ್‌ ಹಾಸನ್‌ ಅವರ ಕಿವಿ ಹಿಂಡಿಸಿ ಇನ್ನೆಂದೂ ಕನ್ನಡ ನಾಡು-ನುಡಿಯ ತಂಟೆಗೆ ಬರದಂತೆ ಎಚ್ಚರಿಕೆ ಕೊಡಿಸಬಹುದೇ? ಅಥವಾ ಕಾಂಗ್ರೆಸ್‌‍ ಪಕ್ಷಕ್ಕೆ ಕನ್ನಡಕ್ಕಿಂತ ಹೈಕಮಾಂಡ್‌ ಭಕ್ತಿ ಹಾಗು ರಾಜಕೀಯ ಮೈತ್ರಿಯೇ ದೊಡ್ಡದೇ? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡಪರ ಹೋರಾಟಗಾರ ಪ್ರವೀಣ್‌ ಶೆಟ್ಟಿ ಅವರು ಮಾತನಾಡಿ, ಸಂಘಟನೆಯ ಸದಸ್ಯರು ಕಮಲ್‌ ಹಾಸನ್‌ ಅವರನ್ನು ಭೇಟಿಯಾಗಿ ಕ್ಷಮೆಯಾಚನೆಗೆ ಆಗ್ರಹಿಸಬೇಕಿತ್ತು. ಆದರೆ, ನಟನನ್ನು ಭೇಟಿಯಾಗುವ ಮೊದಲೇ ಅವರು ಸ್ಥಳದಿಂದ ನಿರ್ಗಮಿಸಿದ್ದರು ಎಂದು ಹೇಳಿದ್ದಾರೆ. ನೀವು ಕರ್ನಾಟಕದಲ್ಲಿ ವ್‌ಯವಹಾರ ಮಾಡಲು ಮತ್ತು ನಿಮ್ಮ ಸಿನಿಮಾಗಳನ್ನು ಪ್ರದರ್ಶಿಸಲು ಬಯಸುತ್ತಿರುವುದೇ ಆದರೆ, ಕನ್ನಡ ಮತ್ತು ಕನ್ನಡಿಗರನ್ನು ಅವಮಾನಿಸುವುದನ್ನು ನಿಲ್ಲಿಸಿ. ನಿಮ್ಮ ಸಿನಿಮಾ ಪ್ರಚಾರ ಮಾಡಲು ಇಲ್ಲಿಗೆ ಬಂದಿದ್ದಿರಿ. ವಿವಾದಾದ್ಮಕ ಹೇಳಿಕೆ ಬಳಿಕ ಕರ್ನಾಟಕ ರಕ್ಷಣಾ ವೇದಿಕೆ ಅವರ ಮುಖಕ್ಕೆ ಕಪ್ಪು ಮಸಿ ಬಳಿಯಲು ಸ್ಥಳಕ್ಕೆ ತೆರಳಿತ್ತು. ಆದರೆ, ಅಷ್ಟರಲ್ಲಾಗಲೇ ಅವರು ಸ್ಥಳದಿಂದ ನಿರ್ಗಮಿಸಿದ್ದರು ಎಂದು ತಿಳಿಸಿದ್ದಾರೆ.

RELATED ARTICLES

Latest News