ಬೆಂಗಳೂರು, ಫೆ.6- ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಅವರು ನಾಳೆ ದೆಹಲಿಗೆ ತೆರಳುತ್ತಿದ್ದು, ಎಲ್ಲರ ದೃಷ್ಟಿ ಈಗ ಬಿಜೆಪಿ ಕೇಂದ್ರ ನಾಯಕತ್ವದತ್ತ ನೆಟ್ಟಿದೆ.
ಸಿಎಂ ದೆಹಲಿ ಪ್ರವಾಸಕ್ಕೂ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೆಹಲಿ ಮಟ್ಟದಲ್ಲೂ ಪ್ರಯತ್ನ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಸಂಪುಟ ವಿಸ್ತರಣೆಯೋ ಅಥವಾ ಸಂಪುಟ ಪುನಾರಚನೆಯೋ ಎಂಬ ಪ್ರಶ್ನೆಗೆ ಸ್ವತಃ ಸಿಎಂ ಬೊಮ್ಮಾಯಿ ಉತ್ತರ ನೀಡಿಲ್ಲ. ಈ ಬಗ್ಗೆ ಪ್ರಶ್ನೆ ಕೇಳಿದರೂ ಬಹಿರಂಗವಾಗಿ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.
ಈ ಗೊಂದಲದ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಇರುವ ಹಿರಿಯರು ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ಪಡುತ್ತಿದ್ದರೆ ಆಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಪ್ರಯತ್ನ ನಡೆಸುತ್ತಿದ್ದಾರೆ. ಸಂಪುಟದಲ್ಲಿ ಖಾಲಿ ಇರುವ ಸ್ಥಾನಗ¼ À ಕೇವಲ 4 ಮಾತ್ರ. ಇನ್ನು ಸಂಪುಟ ಪುನಾರಚನೆ ಆದರಲ್ಲಿ ಕೆಲವು ಹಿರಿಯರನ್ನು ಕೈಬಿಡಬೇಕಾಗುತ್ತದೆ. ಹೀಗಾದಲ್ಲಿ ಯಾರೆಲ್ಲಾ ಸಚಿವ ಸ್ಥಾನ ಕಳೆದುಕೊಳ್ಳುತ್ತಾರೆ ಎಂಬುವುದು ಕೂಡಾ ಕುತೂಹಲಕ್ಕೆ ಕಾರಣವಾಗಿದೆ.
ಕೆ.ಎಸ್ ಈಶ್ವರಪ್ಪ, ಶಶಿಕಲಾ ಜೊಲ್ಲೆ ಸೇರಿದಂತೆ ಕೆಲವರನ್ನು ಸಂಪುಟದಿಂದ ಕೈ ಬಿಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನು ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ.ಸದ್ಯ ವಿಧಾನಸಭೆ ಚುನಾವಣೆಗೆ ಒಂದುವರೆ ವರ್ಷ ಬಾಕಿ ಇದೆ.
ಇಂತಹ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತಾಗಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಸಿಎಂ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆದೆಹಲಿ ಪ್ರವಾಸದಲ್ಲಿ ವರಿಷ್ಠರ ಭೇಟಿ ಬಳಿಕವಷ್ಟೇ ಸಂಪುಟ ವಿಸ್ತರಣೆಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.
ನಾಳೆ ಬೆಳಿಗ್ಗೆ 9.40ರ ಸುಮಾರಿಗೆ ದೆಹಲಿ ತಲುಪುವ ಸಿಎಂ ಬೊಮ್ಮಾಯಿ, ಕೇಂದ್ರದ ಕೆಲವು ಸಚಿವರನ್ನು ಭೇಟಿಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ರಾಜ್ಯದ ಎಲ್ಲ ಲೋಕಸಭಾ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರ ಜತೆ ಸಭೆ ನಡೆಸುವರು.
ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವ ರಾಜ್ಯದ ಸಂಸದರೂ ಈ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಮುಖ್ಯಮಂತ್ರಿಯವರ ಸಚಿವಾಲಯ ತಿಳಿಸಿದೆ. ಸಂಸದರ ಜತೆ ಸಭೆ ಮುಗಿಸಿದ ಬಳಿಕ ಮುಖ್ಯಮಂತ್ರಿಯವರು ದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡುವರು. ಅಂತರರಾಜ್ಯ ಜಲ ವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಸುವ ವಕೀಲರ ತಂಡದ ಜತೆ ಬೊಮ್ಮಾಯಿ ಮಂಗಳವಾರ ಬೆಳಿಗ್ಗೆ ಸಭೆ ನಡೆಸುವರು. ಬಳಿಕ ಕೇಂದ್ರದ ಸಚಿವರನ್ನು ಭೇಟಿ ಮಾಡುವರು. ದೆಹಲಿಯಿಂದ ಹಿಂದಿರುಗುವ ಸಮಯ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿದುಬಂದಿದೆ.
ಈ ನಡುವಲ್ಲೇ ಮುಖ್ಯಮಂತ್ರಿಗಳ ದೆಹಲಿ ಭೇಟಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಕುತೂಹಲಗಳನ್ನು ಸೃಷ್ಟಿಸಿದೆ. ರಾಜ್ಯದಲ್ಲಿ ಖಾಲಿ ಇರುವ ನಾಲ್ಕು ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುತ್ತದೆಯೇ ಅಥವಾ ಕೆಲವು ಕಾರ್ಯನಿರ್ವಹಿಸದ ಸಚಿವರ ಕೈಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡಿ ಸಂಪುಟ ಪುನಾರಚನೆ ಮಾಡಲಾಗುತ್ತದೆಯೇ ಎಂಬುದರ ಕುರಿತು ಊಹಾಪೋಹಗಳು ಶುರುವಾಗಿವೆ.
ಈಗಾಗಲೇ ಬಿಜೆಪಿಯ ಕೇಂದ್ರ ನಾಯಕರು ಐದು ರಾಜ್ಯಗಳಲ್ಲಿನ ಚುನಾವಣಾ ಪ್ರಚಾರದಲ್ಲಿ ಕಾರ್ಯನಿರತರಾಗಿದ್ದು, ಮುಖ್ಯಮಂತ್ರಿಗಳ ಭೇಟಿಯ ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. ಸಿಎಂ ಬೊಮ್ಮಾಯಿ ಅವರು ಬುಧವಾರ ಸಂಪುಟ ಸಭೆ ನಡೆಸಲಿದ್ದು, ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆಯಿದೆ.
ವಿಜಯಪುರ ನಗರ ಶಾಸಕ ಹಾಗೂ ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇತ್ತೀಚೆಗೆ ಸಚಿವ ಸಂಪುಟದಲ್ಲಿ ಪ್ರಮುಖ ಬದಲಾವಣೆಗಳ ಸುಳಿವು ನೀಡಿದ್ದರು. ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಯುಗ ಅಂತ್ಯಗೊಂಡಿದ್ದು, ಕರ್ನಾಟಕದಲ್ಲಿ ಎರಡನೇ ಹಂತದ ನಾಯಕತ್ವವನ್ನು ಬೆಳೆಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದರು.
ಏತನ್ಮಧ್ಯೆ, ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಬಿ-ರಿಪೊರ್ಟ್ ಸಲ್ಲಿಸಿದ ಹಿನ್ನೆಲೆಯಲ್ಲಿ ಮಾಜಿ ಜಲಸಂಪನ್ಮೂಲ ಸಚಿವ ಮತ್ತು ಶಾಸಕ ರಮೇಶ್ ಜಾರಕಿಹೊಳಿ ಅವರ ಆಪ್ತ ಸಹಾಯಕರು ಮತ್ತು ಬೆಂಬಲಿಗರು ಸಂಸತ ವ್ಯಕ್ತಪಡಿಸುತ್ತಿದ್ದಾರೆ. ಈ ಬೆಳವಣಿಗೆಯು ರಮೇಶ್ ಜಾರಕಿಹೊಳಿಯವರು ಮರಳಿ ಸಂಪುಟ ಸಹಾಯಕವಾಗಿದೆ ಎಂದು ಹೇಳುತ್ತಿದ್ದಾರೆ. ರಮೇಶ್ ಜಾರಕಿಹೊಳಿಯವರು ಕೆಲವರ ಸಂಚಿಗೆ ಬಲಿಪಶು ಆಗಿದ್ದರು ಎಂದು ಹೇಳಿದ್ದಾರೆ.
ಆದಾಗ್ಯೂ, ಪೊಲೀಸರ ಬಿ-ರಿಪೋರ್ಟ್ ಸಲ್ಲಿಕೆಯಿಂದ ಜÁರಕಿಹೊಳಿಯವರು ಮರಳಿ ಸಂಪುಟ ಸೇರುವುದು ಅಷ್ಟು ಸುಲಭವಾಗಿಲ್ಲ ಎಂದು ಕೆಲ ನಾಯಕರು ಹೇಳಿದ್ದಾರೆ. ಪೊಲೀಸರು ಸಲ್ಲಿಸುವ ಎಲ್ಲಾ ಬಿ ರಿಪೋರ್ಟ್ಗಳನ್ನು ನ್ಯಾಯಾಲಯ ಅಂಗೀಕರಿಸುವುದಿಲ್ಲ. ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿ ಮಾಜಿ ಸಚಿವರಾಗಿದ್ದು, ನ್ಯಾಯಾಲಯದ ತೀರ್ಪಿಗಾಗಿ ಕಾದುನೋಡಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಯಾರೆಲ್ಲಾ ಆಕಾಂಕ್ಷಿಗಳು?
ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು ಆಕಾಂಕ್ಷಿಗಳ ಸಂಖ್ಯೆ ಸಾಕಷ್ಟಿದೆ. ಎಂಪಿ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬಿವೈ ವಿಜಯೇಂದ್ರ, ರಾಜೂಗೌಡ, ಪೂರ್ಣಿಮಾ ಶ್ರೀನಿವಾಸ್, ಸಿಪಿ ಯೋಗೀಶ್ವರ್ ಪ್ರಯತ್ನ ನಡೆಸುತ್ತಿದ್ದಾರೆ. ಇದರ ಜೊತೆಗೆ ಶ್ರೀ ಮಂತ ಪಾಟೀಲ್, ಎಂ.ಪಿ.ಕುಮಾರಸ್ವಾಮಿ, ಆನಂದ ಮಾಮನಿ ಕೂಡಾ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ.
