ಬೆಂಗಳೂರು, ಜೂ.12- ನೈಋತ್ಯ ಮುಂಗಾರು ಪ್ರಬಲವಾಗಿದ್ದು ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ಮುನ್ಸೂಚನೆಗಳಿವೆ. ನಿನ್ನೆ ಹಾಗೂ ಕಳೆದ ರಾತ್ರಿ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದ ಮಳೆಯಾಗಿದೆ. ಕಾರವಾರ ತಾಲ್ಲೂಕಿನ ಮೈಲವಾಡ ಗ್ರಾಪಂ ವ್ಯಾಪ್ತಿಯಲ್ಲಿ 267 ಮಿ.ಮೀ.ನಷ್ಟು ಭಾರೀ ಪ್ರಮಾಣದ ಮಳೆಯಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಉತ್ತರಕರ್ನಾಟಕ, ಧಾರವಾಡ, ಉಡುಪಿ, ಗದಗ, ದಕ್ಷಿಣ ಕನ್ನಡ, ಹಾವೇರಿ, ರಾಯಚೂರು, ಶಿವಮೊಗ್ಗ, ವಿಜಯನಗರ, ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ, ಮಂಡ್ಯ, ಬೆಂಗಳೂರು ನಗರ, ರಾಮನಗರ, ಹಾಸನ, ಬಳ್ಳಾರಿ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ವ್ಯಾಪಕ ಮಳೆಯಾಗಿದೆ.
ಬೀದರ್, ಚಾಮರಾಜನಗರ, ಕೊಡಗು, ತುಮಕೂರು, ವಿಜಯಪುರ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಿದ್ದು, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ, ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ತೀವ್ರ ಸ್ವರೂಪ ಪಡೆದುಕೊಂಡಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮುಂಗಾರು ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 100-250 ಮಿ.ಮೀ ನಷ್ಟು ಅತ್ಯ ಕ ಮಳೆಯಾಗಿದೆ. ಧಾರವಾಡ ಜಿಲ್ಲೆಯ ಬಹುತೇಕ ಕಡೆ 100 ಮೀ. ಮೀ.ಗೂ ಅ ಕ ಮಳೆಯಾಗಿದೆ. ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳನ್ನು ಇದೇ ರೀತಿಯ ಮಳೆ ಬಿದ್ದಿದೆ.
ಹವಾಮಾನ ಮುನ್ಸೂಚನೆ ಪ್ರಕಾರ, ಬೆಳಗಾವಿ, ಧಾರವಾಡ, ಉ.ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದ.ಕನ್ನಡ, ಕೊಡಗು ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಲಕ್ಷಣಗಳಿದ್ದು ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಆಲರ್ಟ್ ಘೋಷಿಸಿದೆ. ಉಳಿದಂತೆ ಇತರ ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್ ಘೋಷಿಸಲಾಗಿದ್ದು, ಇದೇ ರೀತಿಯ ವಾತಾವರಣ ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಮುಂದುವರಿಯುವ ಮುನ್ಸೂಚನೆಯಿದೆ. ರಾಜಧಾನಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ತಂಪಾದ ಮೇಲೈ ಗಾಳಿಯಿಂದ ಹಾಗಾಗಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗಲಿದೆ.