Friday, May 3, 2024
Homeರಾಷ್ಟ್ರೀಯನ್ಯಾಯಯುತವಾಗಿ ರಾಜ್ಯಕ್ಕೆ ತೆರಿಗೆ ಪಾಲು ಸಿಗುತ್ತಿಲ್ಲ : ಭಾಷಣದಲ್ಲಿ ರಾಜ್ಯಪಾಲ ಅಸಮಾಧಾನ

ನ್ಯಾಯಯುತವಾಗಿ ರಾಜ್ಯಕ್ಕೆ ತೆರಿಗೆ ಪಾಲು ಸಿಗುತ್ತಿಲ್ಲ : ಭಾಷಣದಲ್ಲಿ ರಾಜ್ಯಪಾಲ ಅಸಮಾಧಾನ

ಬೆಂಗಳೂರು,ಫೆ.12- ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯ ಮತ್ತು ಧರ್ಮದ ರೀತಿಯಲ್ಲಿ ತೆರಿಗೆ ಪಾಲು ಸಿಗುತ್ತಿಲ್ಲ ಎಂದು ರಾಜ್ಯಪಾಲ ರಾಜ್ಯಪಾಲ ಥಾವರ್‍ಚಂದ್ ಗೆಲ್ಹೋಟ್ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶವನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಲು ಸಿದ್ದವಿದೆ. ಆದರೆ ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ.

ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ತೆರಿಗೆ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ನಮಗೆ ಸಿಗಬೇಕಾದ ಪಾಲನ್ನು ಪಡೆಯಲು ಎಲ್ಲ ರೀತಿಯ ಪ್ರಯತ್ನಗಳನ್ನು ಮುಂದುವರೆಸಿದ್ದೇವೆ ಎಂದು ವಿವರಿಸಿದ್ದಾರೆ.

ಶೇ.97ರಷ್ಟು ಅನುಷ್ಠಾನ:
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಅಭಿವೃದ್ಧಿ ವಿಚಾರದಲ್ಲೂ ಅಪ್ರತಿಮ ಸಾಧನೆ ಮಾಡಲಾಗಿದೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ದಾಖಲಾರ್ಹ ಮಟ್ಟದ ಅಭಿವೃದ್ಧಿಯಾಗಿದೆ ಎಂದಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಬಜೆಟ್‍ನ ಶೇ.97ರಷ್ಟು ಘೋಷಣೆಗಳಿಗೆ ಅಸೂಚನೆ ಹೊರಡಿಸಿ ಕಾರ್ಯಗತಗೊಳಿಸಿರುವುದು ದಾಖಲೆಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಆತ್ಮೀಯ ಸ್ವಾಗತ

ಬರಕ್ಕೆ 224 ಕೋಟಿ ಬಿಡುಗಡೆ:
ರಾಜ್ಯದಲ್ಲಿ 223 ತಾಲ್ಲೂಕುಗಳು ಬರಬಾತ ಎಂದು ಘೋಷಿಸಲಾಗಿದೆ. ಅವುಗಳಲ್ಲಿ ಕುಡಿಯುವ ನೀರು, ಮೇವಿನ ಲಭ್ಯತೆ ಮುಂತಾದ ತಕ್ಷಣದ ಬರಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಎನ್‍ಡಿಆರ್‍ಎಫ್‍ನಿಂದ 18,171 ಕೋಟಿ ರೂ.ಗಳ ಆರ್ಥಿಕ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಹಣ ಬಿಡುಗಡೆಯಾಗಿಲ್ಲ. ಬರ ಪರಿಹಾರ ತುರ್ತಾಗಿ ಪಡೆದುಕೊಳ್ಳಲು ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದಿದ್ದಾರೆ.

ಬರದಿಂದಾಗಿ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಮೊದಲ ಕಂತಿನಲ್ಲಿ 2000 ರೂ. ಪರಿಹಾರ ಪಾವತಿಸಲು 617 ಕೋಟಿ ರೂ.ಗಳ ಇನ್‍ಪುಟ್ ಸಬ್ಸಿಡಿಯನ್ನು ಬಿಡುಗಡೆ ಮಾಡಲಾಗಿದ್ದು, 32.50 ಲಕ್ಷ ರೈತರ ಖಾತೆಗೆ ಜಮೆ ಮಾಡಲಾಗಿದೆ. ಪರಿಹಾರ ಪಾವತಿಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲಾಗಿದೆ. ಈ ಹಿಂದೆ ಇನ್‍ಪುಟ್ ಸಬ್ಸಿಡಿ ಪಾವತಿಯಲ್ಲಿ ಅವ್ಯವಹಾರ ನಡೆದಿದೆ. ಅನರ್ಹರಿಗೆ ಪರಿಹಾರ ಪಾವತಿಸಿರುವ ಅನೇಕ ಪ್ರಕರಣಗಳು ಗಮನಕ್ಕೆ ಬಂದಿವೆ ಎಂದು ಹೇಳಿದ್ದಾರೆ.

ಪ್ಯಾನ್ ಇಂಡಿಯಾ ‘ಮೈರಾ’ ಚಿತ್ರಕ್ಕೆ ಶ್ರೀನು ಆಕ್ಷನ್ ಕಟ್

ತೊಗರಿ ಬೆಳೆಗೆ ತಗುಲಿದ್ದ ನೆಟ್ಟೆ ರೋಗದಿಂದ ಬಾತರಾದ 2,74,637 ರೈತರ ಬ್ಯಾಂಕ್ ಖಾತೆಗಳಿಗೆ 219 ಕೋಟಿ ರೂ.ಗಳನ್ನು ನೇರವಾಗಿ ಪಾವತಿಸಲಾಗಿದೆ. ಕೇಂದ್ರ ಸರ್ಕಾರ ನಿಗದಿ ಮಾಡಿರುವ ಬೆಂಬಲ ಬೆಲೆಯ ಜೊತೆಗೆ ಪ್ರತಿ ಕ್ವಿಂಟಾಲ್‍ಗೆ 1500 ರೂ.ಗಳನ್ನು ನೀಡಲಾಗುತ್ತಿದೆ. ಬಿತ್ತನೆ ವೈಫಲ್ಯದಿಂದ ಬಾತರಾದ 8.10 ಲಕ್ಷ ರೈತರಿಗೆ 591 ಕೋಟಿ ರೂ.ಗಳ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ ಇತ್ಯರ್ಥಪಡಿಸಲಾಗಿದೆ ಎಂದು ವಿವರಿಸಿದ್ದಾರೆ.

ಬರ ನಿರ್ವಹಣೆಗೆ ಶಾಸಕರ ಅಧ್ಯಕ್ಷತೆಯ ಕಾರ್ಯಪಡೆಗಳು 394 ಸಭೆಗಳನ್ನು, ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಕಾರ 226 ಸಭೆಗಳನ್ನು ನಡೆಸಿ ಜನರ ಸಂಕಷ್ಟಕ್ಕೆ ಸ್ಪಂದಿಸಲಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES

Latest News