ಬೆಂಗಳೂರು, ಮಾ.4- ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕಾಗಿ 5 ಸಾವಿರ ಕೋಟಿ ರೂ. ಅನುದಾನ ಒದಗಿಸಲಾಗಿದೆ. ಭೂಸ್ವಾೀನ, ಪುನರ್ ವಸತಿ ಮತ್ತು ಪುನರ್ ನಿರ್ಮಾಣದ ಕಾರ್ಯಗಳಿಗೆ ಆದ್ಯತೆ ನೀಡಿ ಯೋಜನಾ ಕಾಮಗಾರಿಗಳನ್ನು ಕೈಗೊಳ್ಳುವ ಪ್ರಸ್ತಾಪವನ್ನು ಇಂದು ಮುಖ್ಯಮಂತ್ರಿ ಮಂಡಿಸಿದ ಆಯವ್ಯಯದಲ್ಲಿ ಘೋಷಿಸಲಾಗಿದೆ.
(KARNATAKA BUDGET 2022-ಕರ್ನಾಟಕ ಬಜೆಟ್ 2022 (Live Updates)
ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗಳಿಗೆ 1 ಸಾವಿರ ಕೋಟಿ ರೂ. ಅನುದಾನ ಒದಗಿಸಲಾಗುವುದು.ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ 3 ಸಾವಿರ ಕೋಟಿ ರೂ. ನೀಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗೆ 3 ಸಾವಿರ ಕೋಟಿ ರೂ. ಅನುದಾನ ಒದಗಿಸಲಾಗಿದೆ.
ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆ ವರದಿಗೆ ಕೇಂದ್ರ ಸರ್ಕಾರದ ಸಕ್ಷಮ ಪ್ರಾಕಾರಿಗಳ ತೀರುವಳಿಗಳನ್ನು ಪಡೆದು ಯೋಜನೆ ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಗಾಗಿ 1 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು.
ತುಂಗಾಭದ್ರಾ ಸಮತೋಲನ ಜಲಶಾಯ ನಿರ್ಮಿಸಲು 1 ಸಾವಿರ ಕೋಟಿ ರೂ. ಒದಗಿಸುವ ಪ್ರಸ್ತಾಪ ಮಾಡಿದ್ದು ,ಕಾಳಿ ನದಿಯಿಂದ ಉತ್ತರ ಕರ್ನಾಟಕ 5 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ರೂಪಿಸಲಾಗುವುದು.
