ಸಿದ್ದರಾಮಯ್ಯಗೆ ಈಶ್ವರಪ್ಪ ತಿರುಗೇಟು

Social Share

ಬೆಂಗಳೂರು,ಆ.19- ಅಧಿಕಾರದ ಆಸೆಗಾಗಿ ಟಿಪ್ಪುಗೆ ಪೂಜೆ ಮಾಡಿದ ತಮಗೆ ಬೇಕಾದಾಗ ಗಲಭೆ ಮಾಡಿಸುವ ಅಭ್ಯಾಸವಿದೆ ಎಂಬ ಸತ್ಯ ಗೊತ್ತಿರುವ ವಿಷಯವೇ ಎಂದು ಮಾಜಿ ಸಚಿವಕೆ.ಎಸ್. ಈಶ್ವರಪ್ಪ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾನ್ಯ ಸಿದ್ದರಾಮಯ್ಯನವರೇ ನನ್ನದು ನಿಮ್ಮಂತೆ ಅಧಿಕಾರಕ್ಕಾಗಿ ವಿಲಿವಿಲಿ ಒದ್ದಾಡುವ ಜಾಯಮಾನವಲ್ಲ. ಕಳ್ಳನ ಮನಸ್ಸು ಹುಳ್ ಹುಳ್ಗೆ ಎಂಬ ಗಾದೆ ಮಾತಿನ ತರ ನಿಮ್ಮ ಮನಸ್ಸಿನಲ್ಲಿರುವುದನ್ನೇ ಹೇಳಿದೀರಿ ಎಂದು ತಿರುಗೇಟು ಕೊಟ್ಟಿದ್ದಾರೆ.

Articles You Might Like

Share This Article