Saturday, June 7, 2025
Homeರಾಷ್ಟ್ರೀಯ | Nationalಎಫ್‌ಐಆರ್‌ ರದ್ದುಗೊಳಿಸುವಂತೆ ನ್ಯಾಯಾಲಯ ಮೊರೆ ಹೋದ ಕೆಎಸ್‌‍ಸಿಎ

ಎಫ್‌ಐಆರ್‌ ರದ್ದುಗೊಳಿಸುವಂತೆ ನ್ಯಾಯಾಲಯ ಮೊರೆ ಹೋದ ಕೆಎಸ್‌‍ಸಿಎ

KSCA moves court on FIR

ಬೆಂಗಳೂರು,ಜೂನ್‌.6– ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದ ದುರಂತ ಘಟನೆಗೆ ಸಂಬಂಧಿಸಿದಂತೆ ತಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಕೆಎಸ್‌‍ಸಿಎ ಅಧ್ಯಕ್ಷ ರಘು ರಾಮ್‌ ಭಟ್‌, ಕಾರ್ಯದರ್ಶಿ ಎ ಶಂಕರ್‌ ಮತ್ತು ಖಜಾಂಚಿ ಇಎಸ್‌‍ ಜಯರಾಮ್‌ ಅವರು ಜಂಟಿಯಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.
ಪೊಲೀಸರು ಬಂಧಿಸುವ ಸಾಧ್ಯತೆ ಇದ್ದು ಈಗ ನ್ಯಾಯಾಲಯವನ್ನು ಕೋರಿದ್ದಾರೆ ಮತ್ತು ತುರ್ತು ವಿಚಾರಣೆಯನ್ನು ಕೋರಿದ್ದಾರೆ.

ಈ ಪ್ರಕರಣವನ್ನು ಇಂದು ಮಧ್ಯಾಹ್ನ ನ್ಯಾಯಮೂರ್ತಿ ಕೃಷ್ಣ ಕುಮಾರ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಲಿದೆ.ಜೂನ್‌ 4 ರಂದು ಕ್ರೀಡಾಂಗಣದ ಹೊರಗೆ ದೊಡ್ಡ ಜನಸಮೂಹ ಜಮಾಯಿಸಿದಾಗ ಈ ಕಾಲ್ತುಳಿತ ಸಂಭವಿಸಿದೆ.

ಗುರುವಾರ, ಕಬ್ಬನ್‌ ಪಾರ್ಕ್‌ ಪೊಲೀಸರು ಆರ್‌ಸಿಬಿ, ಈವೆಂಟ್‌ ವ್ಯಾನೇಜ್‌ಮೆಂಟ್‌ ಸಂಸ್ಥೆ ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ ಪ್ರೈವೇಟ್‌ ಲಿಮಿಟೆಡ್‌ ಮತ್ತು ಕೆಎಸ್‌‍ಸಿಎ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ನಂತರ ಸಿಎಂ ಸಿದ್ದರಾಮಯ್ಯ ಅವರು ಮೂರು ಸಂಸ್ಥೆಗಳ ಪ್ರತಿನಿಧಿಗಳನ್ನು ತಕ್ಷಣವೇ ಬಂಧಿಸುವಂತೆ ಪೊಲೀಸ್‌‍ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದರು.

RELATED ARTICLES

Latest News