Saturday, July 27, 2024
Homeರಾಜ್ಯKAS ಅಧಿಕಾರಿ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆ

KAS ಅಧಿಕಾರಿ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆ

ಬೆಂಗಳೂರು, ಮೇ 11- ಕೆ.ಎ.ಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ.

ವೃತ್ತಿಯಲ್ಲಿ ವಕೀಲೆಯಾಗಿರುವ ಚೈತ್ರಾ ಗೌಡ ಅವರ ಮೃತದೇಹ ಗೆದ್ದಲಹಳ್ಳಿಯ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಕೆ.ಎ.ಎಸ್ ಅಧಿಕಾರಿ, ಹೈಕೋರ್ಟ್ ವಕೀಲೆಯಾಗಿದ್ದರೂ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳಲು ಕಾರಣವೇನು? ಎಂಬುದೇ ನಿಗೂಢವಾಗಿದೆ.

ಶಿವಕುಮಾರ್ ಹಾಗೂ ಚೈತ್ರಾ ದಂಪತಿಗೆ 5 ವರ್ಷದ ಮಗ ಕೂಡ ಇದ್ದಾನೆ. ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಚೈತ್ರಾ ಗೌಡ ಈಗ ಇದ್ದಕ್ಕಿದ್ದಂತೆ ಸಂಜಯ್ ನಗರದ ಮನೆಯಲ್ಲಿ ಬೆಡ್ ರೂಮ್ ನಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಘಟನಾ ಸ್ಥಳಕ್ಕೆ ಸಂಜಯ್ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ

RELATED ARTICLES

Latest News