ದೊಡ್ಡಬಳ್ಳಾಪುರ,ಜು.29- ದಾಳಿಗೆ ಬಂದ ಚಿರತೆ ಸಾಕು ನಾಯಿಗಳ ಆರ್ಭಟಕ್ಕೆ ಬೆದರಿ ಪರಾರಿಯಾಗಿರುವ ಘಟನೆ ತಾಲೂಕಿನ ಮಾಕಳಿ ಬಳಿ ನಡೆದಿದೆ.ಬೆಂಗಳೂರು ಮೂಲದ ಸುರೇಂದ್ರ ಎನ್ನುವವರಿಗೆ ಸೇರಿದ ತೋಟದಲ್ಲಿರುವ ಸಾಕು ನಾಯಿಗಳ ಮೇಲೆ ಚಿರತೆ ದಾಳಿ ನಡೆಸಲು ಪದೇ ಪದೇ ಪ್ರಯತ್ನ ನಡೆಸಿದೆ. ಆದರೆ ನಾಯಿಗಳ ಆರ್ಭಟಕ್ಕೆ ಚಿರತೆಯ ದಾಳಿ ಯತ್ನ ವಿಫಲವಾಗಿದೆ.
ಈ ದೃಶ್ಯ ತೋಟದಲ್ಲಿ ಅಳವಡಿಸಿರುವ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ದೊಡ್ಡಬಳ್ಳಾಪುರ ತಾಲೂಕಿನ ಘಾಟಿ, ಮಾಕಳಿ, ಉಜ್ಜನಿ, ಹುಲುಕುಡಿ ಬೆಟ್ಟದ ಸಾಲಿನಲ್ಲಿ ವನ್ಯಜೀವಿಗಳು ಹೆಚ್ಚಾಗಿದ್ದು, ಇತ್ತೀಚಿಗೆ ಬೆಟ್ಟಕ್ಕೆ ಸಮೀಪದ ತೋಟಗಳಿಗೆ ನುಗ್ಗಿ ಹಾವಳಿ ಸೃಷ್ಟಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
- ಕಳ್ಳತನ ಮಾಡಿ ರೈಲು, ಬಸ್ಗಳಲ್ಲಿ ಪರಾರಿಯಾಗುತ್ತಿದ್ದ ಖತರ್ನಾಕ್ ಮನೆಗಳ್ಳರ ಸೆರೆ
- ಮೈಸೂರು : ರೈತನನ್ನು ಬಲಿ ಪಡೆದಿದ್ದ ನರ ಭಕ್ಷಕ ಹುಲಿ ಸೆರೆ
- ಪಿಡಿಒ ಕಿರುಕುಳ ಆರೋಪ, ಲೈಬ್ರರಿಯನ್ ಆತ್ಮಹತ್ಯೆ
- ಕಳ್ಳರು ಕದ್ದಿದ್ದ 1949ಕ್ಕೂ ಹೆಚ್ಚು ಮೊಬೈಲ್ಗಳ ವಶ, 42 ಆರೋಪಿಗಳ ಬಂಧನ
- ಆನೇಕಲ್ ಬಳಿ ಅಚ್ಚರಿ ಮೂಡಿಸಿದ ದೇಶದ್ರೋಹಿಗಳ ‘ಪಾಕಿಸ್ತಾನ್ ಜಿಂದಾಬಾದ್’ ವೈಫೈ ಐಡಿ
