ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಎಲ್​ಇಟಿ ಉಗ್ರನ ಎನ್‍ಕೌಂಟರ್

Social Share

ಶ್ರೀನಗರ, ಜು.31- ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‍ನಲ್ಲಿ ಲಷ್ರ್ಕ-ಎ-ತೊಯ್ಬಾ ಉಗ್ರನ ಹತನಾಗಿದ್ದಾನೆ. ಬಾರಾಮುಲ್ಲಾದ ಪಟ್ಟಣ ನಿವಾಸಿ ಇರ್ಷಾದ್ ಅಹ್ಮದ್ ಭಟ್ ಸಾವನ್ನಪ್ಪಿದ ಉಗ್ರಎಂದು ಗುರುತಿಸಲಾಗಿದೆ.

ಶನಿವಾರ ಸಂಜೆ ಜಿಲ್ಲಾಯ ಬಿನ್ನಿರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಕೈಗೊಳ್ಳಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮರೆಯಲ್ಲಿ ಅಡಗಿದ್ದ ಉಗ್ರರು ಏಕಾಏಕಿ ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ನಂತರ ಗುಂಡಿನ ಚಕಮಕಿ ನಡೆಯಿತು ಇದರಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಈತ ಸಕ್ರಿಯವಾಗಿ ನಿಷೇತ ಭಯೋತ್ಪಾದಕ ಸಂಘಟನೆ ಎಲ್​ಇಟಿಯೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ .ಉಗ್ರನ ಬಳಿ ಇದ್ದ 1 ಎಕೆ47 ರೈಫಲ್, 30 ಸುತ್ತು ಗುಂಡು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

Articles You Might Like

Share This Article