ಬೆಂಗಳೂರು, ಜು. 10-ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಕಷ್ಟಕಾರ್ಪಣ್ಯ ಆಲಿಸುವ ಹೃದಯವಂತಿಕೆಯನ್ನು ರಾಜ್ಯ ಸರ್ಕಾರ ತೋರಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು,ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ತುರ್ತು ಗಮನ ಹರಿಸಬೇಕು. ಆದರೆ, ಶಾಸಕರ ಬಂಡಾಯ ತಣಿಸುವುದಕ್ಕೆ ಕಾಂಗ್ರೆಸ್ ಪಕ್ಷದಲ್ಲಿನ ಬೇಗುದಿಯನ್ನು ಕಡಿಮೆ ಮಾಡಲು ಸಿಎಂ, ಡಿಸಿಎಂ ಅವರಿಗೆ ಸಮಯವೇ ಸಾಲುತ್ತಿಲ್ಲ ಎಂದು ಟೀಕಿಸಿದ್ದಾರೆ.
ಇದನ್ನು ನಾನು ತಪ್ಪೆನ್ನಲಾರೆ. ಆದರೆ, ಪಾಲಿಕೆ ನೌಕರರು ಎಸಗಿದ ಪಾಪವೇನು? ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿಳಂಬ ಧೋರಣೆ ಯಾಕೆ? ಸ್ವತಃ ಮುಖ್ಯಮಂತ್ರಿ ಅವರೇ ಮಾನವೀಯ ನೆಲೆಗಟ್ಟಿನಲ್ಲಿ ತಕ್ಷಣವೇ ಕ್ರಮ ವಹಿಸುತ್ತಿಲ್ಲ, ಏಕೆ? ಹಗಲಿರುಳು ಜನರಿಗಾಗಿ ದುಡಿಯುವ ಅವರ ಬದುಕಿಗೂ ಗ್ಯಾರಂಟಿ ಕೊಡಬೇಕಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.
ಪಾಲಿಕೆಗಳ ನಿತ್ಯದ ಯಾವ ಕೆಲಸ ಕಾರ್ಯಗಳು ನಿಲ್ಲಬಾರದು. ಸ್ವಚ್ಛತೆ, ನೈರ್ಮಲ್ಯ ಹಾಗೂ ಸ್ಥಳೀಯ ಆಡಳಿತದ ದೃಷ್ಟಿಯಿಂದ ಪಾಲಿಕೆಗಳು ಮಹತ್ವ ಹೊಂದಿವೆ ಎಂಬುದನ್ನು ಆಡಳಿತಗಾರರು ಮರೆಯಬಾರದು ಎಂದು ಅವರು ತಿಳಿಸಿದ್ದಾರೆ.
- ಕೇಸರಿ ಶಾಲು ಧರಿಸಿದ್ದ ಟ್ರಾವಲ್ಸ್ ಕಾರ್ಮಿಕ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಮೂವರು ಕಿಡಿಗೇಡಿಗಳ ಸೆರೆ
- ರೌಡಿ ಬಿಕ್ಲುಶಿವ ಕೊಲೆಯ ಪ್ರಮುಖ ಆರೋಪಿ ಜಗ್ಗಿ ಅರೆಸ್ಟ್
- ಆರ್ಎಸ್ಎಸ್ನ ಪ್ರಾರ್ಥನೆ ಮಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿಸಿಎಂ ಡಿಕೆಶಿ
- “ಟೆಸ್ಟ್ ಕ್ರಿಕೆಟ್ನಿಂದ ಕೊಹ್ಲಿ ನಿವೃತ್ತಿ ನಿರ್ಧಾರದ ಹಿಂದೆ ಏನೋ ಅಸಾಮಾನ್ಯ ಇರಬಹುದು”
- ಬೆಂಗಳೂರಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ಬೀದಿ ನಾಯಿಗಳಿಗೆ ಊಟ ಹಾಕುವಂತಿಲ್ಲ