ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಬೆಂಗಳೂರು, ಮಾ.27- ಲೋಕಸಭೆ ಚುನಾವಣೆ ಕಾವಿನ ನಡುವೆಯೇ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಚರ-ಸ್ಥಿರ ಅಕ್ರಮ ಸಂಪತ್ತನ್ನು ಪತ್ತೆಹಚ್ಚಿದ್ದಾರೆ. ರಾಜಧಾನಿ ಬೆಂಗಳೂರು, ಉಡುಪಿ, ಮೈಸೂರು, ಕೊಡಗು, ಕಾರವಾರ, ಬೀದರ್, ಧಾರವಾಡ, ವಿಜಯಪುರ, ಚಿಕ್ಕಬಳ್ಳಾಪುರ, ಮಂಡ್ಯ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕ ವಲಯದಿಂದ ಬಂದ ದೂರುಗಳನ್ನಾಧರಿಸಿ ಪರಿಶೀಲನೆ ನಡೆಸಿದ ನಂತರ … Continue reading ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ