Saturday, May 4, 2024
Homeರಾಜ್ಯಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಡಿಸಿಎಂಗೆ ದೂರು

ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಡಿಸಿಎಂಗೆ ದೂರು

ಬೆಂಗಳೂರು,ನ.10- ಶಿವಮೊಗ್ಗದ ಜಿಲ್ಲಾ ಉಸ್ತುವಾರಿ ಸಚಿವರು ಯಾರಿದ್ದಾರೋ ಗೊತ್ತಿಲ್ಲ ಎಂದು ವಿವಾದಿತ ಹೇಳಿಕೆ ನೀಡಿ, ಗೊಂದಲ ಮೂಡಿಸುತ್ತಿರುವ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ದೂರು ನೀಡಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಮಧು ಬಂಗಾರಪ್ಪ, ಅಧ್ಯಕ್ಷರ ಬಳಿ ಏನು ಹೇಳಬೇಕೋ ಹೇಳಿದ್ದೇನೆ. ಬಹಿರಂಗವಾಗಿ ಮಾತನಾಡುವುದಿಲ್ಲ ಎಂದಿದ್ದಾರೆ. ಇದೆಲ್ಲ ಪಕ್ಷದ ಆಂತರಿಕ ವಿಚಾರ, ಏನೇ ಇದ್ದರೂ ಪಕ್ಷವೇ ನಿರ್ಣಯ ಕೈಗೊಳ್ಳುತ್ತದೆ, ನನಗೆ ಬೇರೆ ಕೆಲಸ ಕೊಟ್ಟಿದ್ದಾರೆ. ನಾನಾಗಲಿ ಬೇಳೂರಾಗಲಿ ಹುಷಾರಾಗಿ ಮಾತನಾಡುವುದು ಒಳ್ಳೆಯದು. ಬೇಳೂರು ಬಹಿರಂಗ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲಿ ಉತ್ತರ ಕೊಡಬೇಕೋ ಅಲ್ಲಿ ಕೊಡುತ್ತೇನೆ ಎಂದರು.

ಮತ್ತೊಬ್ಬ ಮೋಸ್ಟ್ ವಾಂಟೆಡ್ ಉಗ್ರನನ್ನ ಬೇಟೆಯಾಡಿದ ‘ಅಪರಿಚಿತ’ ಬಂಧೂಕುದಾರಿ

ಹಸ್ತದ ಆಶೀರ್ವಾದ, ಪಕ್ಷದ ಅಂಬ್ರೆಲ್ಲಾ ಅಡಿ ನಾವೆಲ್ಲ ಗೆದ್ದು ಬಂದಿದ್ದೇವೆ. ವೈಯಕ್ತಿಕವಾಗಿ ನಾವು ಯಾರೂ ಗೆದ್ದವರಲ್ಲ, ಹೀಗಾಗಿ ಹೇಗಿರಬೇಕು ಅನ್ನೋದು ಮುಖ್ಯವಾಗಿದೆ. ಇಲ್ಲಿ ವ್ಯಕ್ತಿಗಿಂತ ಪಕ್ಷ ಬಹಳ ಮುಖ್ಯ ಎಂದರು.
ಅಧ್ಯಕ್ಷರು, ಮುಖ್ಯಮಂತ್ರಿಯವರು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ. ಅವರ ಮುಂದೆ ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೇನೆ.

ಮಾಧ್ಯಮದ ಮುಂದೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಶಿವಮೊಗ್ಗದಲ್ಲಿ ಈಗಲೂ ಕಾಂಗ್ರೆಸ್ ಪರ ವಾತಾವರಣವಿದೆ. ಮಾಧ್ಯಮದಲ್ಲಿ ಬೇಳೂರುರನ್ನು ಹೆಚ್ಚಾಗಿ ತೋರಿಸಲಾಗುತ್ತದೆ, ಜನ ನೋಡುತ್ತಾರೆ. ಶಿವಮೊಗ್ಗದ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳಬೇಕಿಲ್ಲ. ನಾವು ಸರಿ ಮಾಡಿಕೊಳ್ತೇವೆ, ಪಕ್ಷ ಇದೆ. ಅಲ್ಲಿ ಉತ್ತರ ಕೊಟ್ಟುಕೊಳ್ತೇವೆ ಎಂದರು.

RELATED ARTICLES

Latest News