Sunday, April 28, 2024
Homeರಾಷ್ಟ್ರೀಯಮಧ್ಯಪ್ರದೇಶದಲ್ಲಿ ಕೋಮುಗಲಭೆ, ಮೂರು ಪ್ರದೇಶಗಳಲ್ಲಿ ನಿಷೇದಾಜ್ಞೆ

ಮಧ್ಯಪ್ರದೇಶದಲ್ಲಿ ಕೋಮುಗಲಭೆ, ಮೂರು ಪ್ರದೇಶಗಳಲ್ಲಿ ನಿಷೇದಾಜ್ಞೆ

ಶಾಜಾಪುರ, ಜ 9 (ಪಿಟಿಐ) ಧಾರ್ಮಿಕ ಮೆರವಣಿಗೆಯಲ್ಲಿ ಭಾಗವಹಿಸಿದ್ದವರ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಶಾಜಾಪುರ ನಗರದ ಮೂರು ಪ್ರದೇಶಗಳಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ.

ನಿನ್ನೆ ಸಂಜೆ ಮಗರಿಯಾ ಪ್ರದೇಶದಲ್ಲಿ ನಡೆದ ಈ ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಈ ಪ್ರದೇಶದಲ್ಲಿ ಸೂಕ್ತ ಭದ್ರತೆಯನ್ನು ನಿಯೋಜಿಸಲಾಗಿದೆ ಮತ್ತು ಈ ಸಂಬಂಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶಾಜಾಪುರ ಕಲೆಕ್ಟರ್ ರಿಜು ಬಫ್ನಾ ಅವರು ಎಕ್ಸ್ ಪೋಸ್ಟ್‍ನಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್‍ನ (ಸಿಆರ್‍ಪಿಸಿ) ಸೆಕ್ಷನ್ 144 ಅನ್ನು ಮೂರು ಪ್ರದೇಶಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

ತ್ರಿಪುರಾದ ಧಲೈನಲ್ಲಿ NLFT ಉಗ್ರ ಬಿಎಸ್‍ಎಪ್ ಮುಂದೆ ಶರಣಾಗತಿ

ಪ್ರಥಮ ಮಾಹಿತಿ ವರದಿಯ ಪ್ರಕಾರ, ನಿನ್ನೆ ರಾತ್ರಿ 8.30 ರ ಸುಮಾರಿಗೆ ಮಸೀದಿ ಬಳಿ ನಾಗ್-ನಾಗಿನ್ ರಸ್ತೆಯಲ್ಲಿ ಏಳು-ಎಂಟು ಜನರು ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ಮೊದಲು ಸಾಮಾನ್ಯ ಸಂಜೆ ಮೆರವಣಿಗೆಯನ್ನು ನಡೆಸುತ್ತಿದ್ದಾಗ ಜನರ ಗುಂಪನ್ನು ತಡೆದರು. ಮೆರವಣಿಗೆಯ ಭಾಗವಾಗಿದ್ದ ಮೋಹಿತ್ ರಾಥೋಡ್ ಎಂಬುವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ವಿವಾದದ ಕೇಂದ್ರ ಬಿಂದುವಾಗಿರುವ ಮಗರಿಯಾ, ಕಚ್ಚಿವಾಡ ಮತ್ತು ಲಾಲ್‍ಪುರಗಳಲ್ಲಿ ನಿಷೇದಾಜ್ಞೆ ವಿಧಿಸಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದರು.

ಆ ಪ್ರದೇಶದಿಂದ ಮೆರವಣಿಗೆಯನ್ನು ಹೊರಕ್ಕೆ ತೆಗೆದುಕೊಳ್ಳದಂತೆ ವ್ಯಕ್ತಿಗಳು ಅವರಿಗೆ ಹೇಳಿದರು ಮತ್ತು ನಂತರ ಜನರ ಗುಂಪು ಅಲ್ಲಿ ಜಮಾಯಿಸಿತು ಎಂದು ಎಫ್‍ಐಆರ್‍ನಲ್ಲಿ ತಿಳಿಸಲಾಗಿದೆ.

RELATED ARTICLES

Latest News