ಕಾಂಗ್ರೆಸ್ ಸಾಧಿಸಬಹುದಾದಂತ ಭರವಸೆಗಳನ್ನು ಮಾತ್ರ ನೀಡುತ್ತದೆ : ಮಲ್ಲಿಕಾರ್ಜುನ್ ಖರ್ಗೆ

ನವದೆಹಲಿ,ಏ.5- ಕಾಂಗ್ರೆಸ್ ಪಕ್ಷ ಕಾರ್ಯಸಾಧುವಾದಂತಹ ಭರವಸೆಗಳನ್ನು ಮಾತ್ರ ನೀಡುತ್ತದೆ, ಜನರನ್ನು ನಂಬಿಸಲು ಉತ್ಪ್ರೇಕ್ಷೆಯ ಆಶ್ವಾಸನೆಗಳನ್ನು ಪ್ರಕಟಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಎಐಸಿಸಿ ಕೇಂದ್ರ ಕಚೇರಿಯಲ್ಲಿಂದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ನಾವು ಭರವಸೆಗಳನ್ನು ನೀಡಿ ಭಾಷಣ ಮಾಡಿದರೆ ಸಾಲುವುದಿಲ್ಲ. ಅದನ್ನ ಮನೆಮನೆಗೆ ತಲುಪಿಸಬೇಕು ಎಂದು ಕರೆ ನೀಡಿದರು. ಕಾಂಗ್ರೆಸ್ ಪಕ್ಷ ಈ ಮೊದಲು ನೀಡಿದ್ದ ಎಲ್ಲಾ ಭರವಸೆಗಳನ್ನೂ ಈಡೇರಿಸಿದೆ. ಪ್ರಸ್ತುತ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶ, ಕರ್ನಾಟಕ, ತೆಲಂಗಾಣ ರಾಜ್ಯಗಳಲ್ಲೂ … Continue reading ಕಾಂಗ್ರೆಸ್ ಸಾಧಿಸಬಹುದಾದಂತ ಭರವಸೆಗಳನ್ನು ಮಾತ್ರ ನೀಡುತ್ತದೆ : ಮಲ್ಲಿಕಾರ್ಜುನ್ ಖರ್ಗೆ