ಹುಡುಗಿ ವಿಚಾರಕ್ಕೆ ಬಾಲ್ಯ ಸ್ನೇಹಿತನನ್ನೇ ಕೊಂದಿದ್ದ ಹಂತಕನ ಬಂಧನ

ಬೆಂಗಳೂರು, ಸೆ.24- ಹುಡುಗಿ ವಿಚಾರಕ್ಕೆ ಜಗಳ ನಡೆದು ಬಾಲ್ಯ ಸ್ನೇಹಿತನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಸಂಜಯ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಗೆದ್ದಲಹಳ್ಳಿಯಲ್ಲಿ ಸ್ನೇಹಿತ ವರುಣ್‌ ಕೋಟ್ಯಾನ್‌ ಜೊತೆ ವಾಸವಾಗಿದ್ದ ದಿವೇಶ್‌ ಹೆಗ್ಡೆ(24) ಬಂಧಿತ ಆರೋಪಿ. ಈತ ಕೋರಮಂಗಲದ ಜೊಮೊಟೋ ದಲ್ಲಿ ಕೆಲಸ ಮಾಡುತ್ತಿದ್ದಾನೆ.ಬಾಗಲೂರಿನ ಕಂಪನಿಯೊಂದರಲ್ಲಿ ಸೇಫ್ಟಿ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ ಸ್ನೇಹಿತ ವರುಣ್‌ ಗೆದ್ದಲಹಳ್ಳಿಯಲ್ಲಿ ಮನೆ ಮಾಡಿಕೊಂಡಿದ್ದನು. ವರುಣ್‌, ದಿವೇಶ್‌ ಮತ್ತು ಫ್ಯಾಷನ್‌ ಡಿಸೈನರ್‌ ಆಗಿರುವ ಯುವತಿ ಬಾಲ್ಯ ಸ್ನೇಹಿತರಾಗಿದ್ದು, ಇವರೆಲ್ಲರೂ ಉಡುಪಿ ಮೂಲದವರು. … Continue reading ಹುಡುಗಿ ವಿಚಾರಕ್ಕೆ ಬಾಲ್ಯ ಸ್ನೇಹಿತನನ್ನೇ ಕೊಂದಿದ್ದ ಹಂತಕನ ಬಂಧನ