ಬೆಂಗಳೂರು,ಡಿ.1- ಮಂಗಳೂರು ಕುಕ್ಕರ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶಂಕಿತ ಭಯೋತ್ಪಾದಕ ಮೊಹಮ್ಮದ್ ಶಾರೀಕ್ ಜೊತೆಗಿನ ಕೇರಳದ ಸಂಪರ್ಕವನ್ನು ಪತ್ತೆಹಚ್ಚುವತ್ತ ಗಮನಹರಿಸಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮತ್ತು ಸೈಬರ್ ಕ್ರೈಂ ಘಟಕದ ಅಧಿಕಾರಿಗಳು ಈಗಾಗಲೇ ಕೇರಳ ತಲುಪಿದ್ದು, ಶಂಕಿತ ಭಯೋತ್ಪಾದಕ ಮೊಹಮ್ಮದ್ ಶಾರೀಕ್ನ ನಂಟು ಭೇದಿಸಲು ಹುಡುಕಾಟ ನಡೆಸಿದ್ದಾರೆ.
ಮೊಹಮ್ಮದ್ ಶಾರೀಕ್ ಕೇರಳದ ಆಲುವಾ, ಮುನಂಬಂ ಮತ್ತು ಕೊಚ್ಚಿ ನಗರಗಳಲ್ಲಿ ತಂಗಿದ್ದ ಎಂಬ ಮಾಹಿತಿ ಸಿಕ್ಕಿದೆ. ಮೊಹಮ್ಮದ್ ಶಾರೀಕ್ ಡ್ರಗ್ ದಂಧೆಯಲ್ಲಿಯೂ ಭಾಗಿಯಾಗಿರುವ ಬಗ್ಗೆಯೂ ತನಿಖಾಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ.
ಭಾರತದ ಜಿ20 ಅಧ್ಯಕ್ಷ ಸ್ಥಾನಕ್ಕೆ ಅಮೆರಿಕ ಬೆಂಬಲ
ಮೊಹಮ್ಮದ್ ಶಾರಿಕ್ನನ್ನು ನಿಯಂತ್ರಿಸುವ ಮತ್ತು ಹಿಡಿತದಲ್ಲಿಟ್ಟುಕೊಂಡು ಆತನಿಂದ ಕೆಲಸಗಳನ್ನು ಮಾಡಿಸುತ್ತಿದ್ದ ಕೆಲವು ಕಿಂಗ್ಪಿನ್ಗಳನ್ನು ಅವರು ಹುಡುಕುತ್ತಿದ್ದಾರೆ. ಈ ಗುಂಪು ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಯೋತ್ಪಾದಕ ಕೃತ್ಯಗಳನ್ನು ಯೋಜಿಸಿದೆ.
ದೇಶದಲ್ಲಿ ನಡೆಯಲು ಯೋಜಿಸಿದ್ದ ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ನೀಡಲು ಚಿನ್ನದ ಕಳ್ಳಸಾಗಣೆ ಮತ್ತು ಮಾದಕವಸ್ತು ಕಳ್ಳಸಾಗಣೆಯಲ್ಲಿ ಈ ತಂಡ ತೊಡಗಿತ್ತು ಎಂದು ಮೂಲಗಳು ವಿವರಿಸಿವೆ.
ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿಗೆ ಮರಾಠಿ ಪುಂಡರಿಂದ ಹಲ್ಲೆ
ಈ ಗುಂಪಿಗೆ ಕೇರಳದಲ್ಲಿ ರಾಜಕೀಯ ಬೆಂಬಲವಿದೆಯೇ ಎಂಬ ಬಗ್ಗೆ ಎನ್ಐಎ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯಲ್ಲೂ ತನಿಖೆ ನಡೆಯಲಿದೆ ಎಂದು ಹೇಳಲಾಗಿದೆ.
ನವೆಂಬರ್ 19ರಂದು ಕರಾವಳಿ ಪಟ್ಟಣ ಮಂಗಳೂರಿನ ನಾಗೋರಿ ಪ್ರದೇಶದಲ್ಲಿ ಕುಕ್ಕರ್ ಸ್ಪೋಟ ಸಂಭವಿಸಿದೆ. ಘಟನೆ ನಂತರ ಕರ್ನಾಟಕ ಪೊಲೀಸರು ಇದನ್ನು ಭಯೋತ್ಪಾದಕ ಕೃತ್ಯ ಎಂದು ಘೋಷಿಸಿದ್ದಾರೆ.
ಯಾವುದೇ ಕಾರಣಕ್ಕೂ ರೌಡಿಗಳನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ : ಬೊಮ್ಮಾಯಿ
ಶಂಕಿತ ಭಯೋತ್ಪಾದಕ ಶಾರೀಕ್ನ ಕೃತ್ಯ ಮತ್ತು ಕ್ರಮವು ಜಾಗತಿಕ ಭಯೋತ್ಪಾದನಾ ಜಾಲದಿಂದ ಪ್ರೇರಿತವಾಗಿದೆ ಎಂದು ಹೇಳಲಾಗಿದ್ದು, ಈ ಬೇರುಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ತನಿಖೆಗಾಗಿ ಕರ್ನಾಟಕ ಸರ್ಕಾರ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಿತ್ತು.
Mangaluru, blast, NIA, begins, probe, unearth, Kerala, roots,