ಬೆಂಗಳೂರು ಜು 23: ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ದಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40 ಕ್ವಿಂಟಾಲ್ನಂತೆ ಗರಿಷ್ಠ 5 ಎಕರೆಗೆ 200 ಕ್ವಿಂಟಾಲ್ವರೆಗೆ ಮಿತಿಗೊಳಿಸಿ ಖರೀದಿಸಲು ಆದೇಶ ಹೊರಡಿಸಿದೆ.
ಈ ಆದೇಶವು ಸದರಿ ಯೋಜನೆಯಡಿ ಈಗಾಗಲೇ ನೋಂದಾಯಿಸಿರುವ ರೈತರಿಗೂ ಸಹ ಅನ್ವಯವಾಗಲಿದೆ. ಪ್ರತಿ ಕೆ.ಜಿ.ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಲಾ 2 ರೂಪಾಯಿಗಳಂತೆ ಒಟ್ಟು 4 ರೂಪಾಯಿ ಬೆಂಬಲ ಬೆಲೆಯೊಂದಿಗೆ ಮಾವು ಖರೀದಿಗೆ ದಿ:25-06-2025ರಂದು ಆದೇಶ ಹೊರಡಿಸಲಾಗಿತ್ತು.
ಈ ಆದೇಶದನ್ವಯ ಪ್ರತಿ ಎಕರೆಗೆ 20 ಕ್ವಿಂಟಾಲ್ನAತೆ ಗರಿಷ್ಟ 5 ಎಕರೆಗೆ 100 ಕ್ವಿಂಟಾಲ್ವರೆಗೆ ಮಿತಿಗೊಳಿಸಲಾಗಿತ್ತು ಇದೀಗ ಮಾರ್ಪಾಡು ಆದೇಶದಲ್ಲಿ ಈ ಮಿತಿಯನ್ನು 200 ಕ್ವಿಂಟಾಲ್ಗೆ ವಿಸ್ತರಿಸಲಾಗಿದೆ.
ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿರವರು ಖರೀದಿ ಮಿತಿ ವಿಸ್ತರಣೆ ಕುರಿತಂತೆ ಪತ್ರ ಬರೆದು ಕೇಂದ್ರಕ್ಕೂ ಮನವಿ ಮಾಡಿದ್ದು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಕ್ರಮಕ್ಕೆ ನಿರ್ದೇಶನ ಹೊರಡಿಸಿದ್ದಾರೆ.
- ಬೆಂಬಲ ಬೆಲೆಯೊಂದಿಗೆ ಮಾವು ಖರೀದಿ ಮಿತಿ 200 ಕ್ವಿಂಟಾಲ್ಗೆ ವಿಸ್ತರಣೆ
- ಧರ್ಮಸ್ಥಳದಲ್ಲಿ ಅಸಹಜ ಸಾವು ಪ್ರಕರಣದ ತನಿಖೆಗೆ 20 ಅಧಿಕಾರಿಗಳ ಎಸ್ಐಟಿ ರಚನೆ
- ಸೆ. 22ರಿಂದ 15 ದಿನ ರಾಜ್ಯದಲ್ಲಿ ಮತ್ತೆ ಜಾತಿ ಸಮೀಕ್ಷೆ
- ಬಿಕ್ಲು ಶಿವ ಕೊಲೆ ಪ್ರಕರಣ : 2ನೇ ಬಾರಿಗೆ ವಿಚಾರಣೆಗೆ ಹಾಜರಾದ ಭೈರತಿ ಬಸವರಾಜ್
- ಜು.25 ರಿಂದ 27ರವರೆಗೆ ಎಸ್ಕಾಂ ಆನ್ಲೈನ್ ಸೇವೆ ಅಲಭ್ಯ