ಗಾಲಿ ಕುರ್ಚಿಯಲ್ಲಿ ಬಂದು ಹಕ್ಕು ಚಲಾಯಿಸಿದ ಮನಮೋಹನ್ ಸಿಂಗ್

Social Share

ನವದೆಹಲಿ,ಆ.6-ಇಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ಸಂಸತ್‍ಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಡಾ. ಮನಮೋಹನ್ ಸಿಂಗ್ ಅವರನ್ನು ಕಳೆದ ವರ್ಷ ಕರೋನವೈರಸ್‍ಗೆ ಧನಾತ್ಮಕ ಪರೀಕ್ಷೆ ನಡೆಸಲಾಗಿತ್ತು. ದೇಶಾದ್ಯಂತ ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದ್ದರು.

ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುವ ಮೊದಲು, ಅವರು 1991 ಮತ್ತು 1996ರ ನಡುವೆ ಹಣಕಾಸು ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಇಂದು ಬೆಳಗ್ಗೆ 10 ಗಂಟೆಗೆ ಸಂಸತ್ತಿನಲ್ಲಿ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಮತದಾನ ಸಂಜೆ 5 ಗಂಟೆಯವರೆಗೆ ನಡೆದಿದೆ.

ಉಪರಾಷ್ಟ್ರಪತಿ ಚುನಾವಣೆಯ ಕಣದಲ್ಲಿ ಎನ್‍ಡಿಎ ಬೆಂಬಲಿತ ಜಗದೀಪ್ ಧನ್ಕರ್ ಸ್ರ್ಪಸಿದ್ದು, ಕಾಂಗ್ರೆಸ್‍ನ ಮಾರ್ಗರೇಟ್ ಆಳ್ವ ಅವರನ್ನು ಸ್ಪರ್ಧೆವೊಡ್ಡಿದ್ದಾರೆ. ಧನ್ಕರ್ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರೆ, ಆಳ್ವಾ ಅವರು ಗೋವಾ, ಗುಜರಾತ್ ಮತ್ತು ಉತ್ತರಾಖಂಡದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.

Articles You Might Like

Share This Article