Friday, October 31, 2025
Homeಜಿಲ್ಲಾ ಸುದ್ದಿಗಳು | District Newsಮೈಸೂರು | Mysuruಸಿಎಂ ತವರಿನಲ್ಲಿ ಮತ್ತೆ ಬಾಲ ಬಿಚ್ಚಿದ ಮೈಕ್ರೋ ಫೈನಾನ್ಸ್ ಕಂಪನಿಗಳು, ಸಾಲದ ಕಂತು ಕಟ್ಟದಿದ್ದಕ್ಕೆ ಮನೆ...

ಸಿಎಂ ತವರಿನಲ್ಲಿ ಮತ್ತೆ ಬಾಲ ಬಿಚ್ಚಿದ ಮೈಕ್ರೋ ಫೈನಾನ್ಸ್ ಕಂಪನಿಗಳು, ಸಾಲದ ಕಂತು ಕಟ್ಟದಿದ್ದಕ್ಕೆ ಮನೆ ಜಪ್ತಿ

Microfinance companies

ಮೈಸೂರು, ಅ. 31-ಸಿಎಂ ತವರಿನಲ್ಲಿ ಮೈಕ್ರೋ ಫೈನಾನ್ಸ್ ಮತ್ತೆ ಬಾಲ ಬಿಚ್ಚಿದೆ. ಸಾಲದ ಕಂತು ಕಟ್ಟಿಲ್ಲ ಎಂದು ಮನೆ ಜಪ್ತಿ ಮಾಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಘಟನೆ ನಡೆದಿದೆ.ಕಾಲವಕಾಶ ಕೋರಿದ್ದರೂ ಸ್ಪಂದಿಸದ ಫೈನಾನ್ಸ್ ನ್ಯಾಯಾಲಯದಿಂದ ಆದೇಶ ತಂದು ಜಪ್ತಿ ಮಾಡಿದ್ದಾರೆ. ಇದೀಗ ಸಾಲ ಪಡೆದ ಕುಟುಂಬ ಬೀದಿಪಾಲಾಗಿದೆ.

ಮನೆ ನಿರ್ಮಾಣ ಸಂಬಂಧ ಇಸ್ವೀಟಾಸ್ ಸ್ಟಾಲ್ ಫೈನಾನ್ಸ್ ನಲ್ಲಿ ಚಿನ್ನಸ್ವಾಮಿ 2023ರಲ್ಲಿ 2,70,000 ರೂ. ಸಾಲ ಪಡೆದಿದ್ದರು.ನಂತರ ಚಿನ್ನಸ್ವಾಮಿ.ಈಗಾಗಲೆ 19 ಕಂತುಗಳ 18,9000 ಸಾಲ ಮರುಪಾವತಿಸಿದ್ದಾರೆ. ಚಿನ್ನಸ್ವಾಮಿ ಪತ್ನಿ ಸಹ ಇಸ್ವೀಟಾಸ್ ಫೈನಾನ್ಸ್‌ನಲ್ಲಿ ಗಂಪು ಸಾಲ ಪಡೆದಿದ್ದರು.

- Advertisement -

ಮನೆ ಸಾಲಮರುಪಾವತಿ ಕಂತಿನ ಹಣವನ್ನು ಗುಂಪು ಸಾಲಕ್ಕೆ ಜಮೆ ಮಾಡಿಕೊಂಡಿದೆ ಎಂದು ಚಿನ್ನಸ್ವಾಮಿ ಆರೋಪವಾಗಿದೆ.ತಮ್ಮ ಅನುಮತಿ ಪಡೆಯೆದೆ ಸುಮಾರು 60 ಸಾವಿರಕ್ಕೂ ಹೆಚ್ಚು ಹಣ ಗುಂಪು ಸಾಲಕ್ಕೆ ಜಮೆ ಮಾಡಿಕೊಂಡಿದ್ದಾರೆ. ಇದೀಗ ಏಕಾಏಕಿ ಮನೆ ಸಾಲದ ಕಂತು ಕಟ್ಟಿಲ್ಲವೆಂದು ಮನೆ ಜಪ್ತಿ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸಾಲ ಮರುಪಾವತಿಗಾಗಿ ಚಿನ್ನಸ್ವಾಮಿ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಕಾಲಾವಕಾಶ ಕೇಳಿದ್ದರು.ಯಾವುದಕ್ಕು ತಲೆಕೆಡೆಸಿಕೊಳ್ಳದ ಫೈನಾನ್ಸ್ ಸಾಲ ಮರುಪಾವತಿ ಮಾಡುವಂತೆ ತಾಕೀತು ಮಾಡಿತ್ತು.

ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆ ಜಪ್ತಿ ಮಾಡಿ ನೋಟಿಸ್‌ ಅಂಟಿಸಿದ್ದಾರೆ. ಇದೀಗ ಮನೆ ಜಪ್ತಿ ಕಾರಣ ಚಿನ್ನಸ್ವಾಮಿ ಮತ್ತು ಕುಟುಂಬ ಬೀದಿಗೆ ಬಿದ್ದಂತಾಗಿದೆ. ಮನೆ ಜಪ್ತಿ ತೆರವು ಗೊಳಿಸುವಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರ ತವರು ಕ್ಷೇತ್ರದಲ್ಲೇ ಮತ್ತೆ ಮೈಕ್ರೋ ಫೈನಾನ್ಸ್ ಬಾಲ ಬಿಚ್ಚಿದೆ.

- Advertisement -
RELATED ARTICLES

Latest News