Friday, June 13, 2025
Homeರಾಜ್ಯಇ.ಡಿ ಬಿಜೆಪಿ ತಂಟೆಗೆ ಹೋಗಿಲ್ಲ, ಹೋಗುವುದು ಇಲ್ಲ: ದಿನೇಶ್‌ ಗುಂಡೂರಾವ್‌

ಇ.ಡಿ ಬಿಜೆಪಿ ತಂಟೆಗೆ ಹೋಗಿಲ್ಲ, ಹೋಗುವುದು ಇಲ್ಲ: ದಿನೇಶ್‌ ಗುಂಡೂರಾವ್‌

ಬೆಂಗಳೂರು,ಜೂ.12- ಕಾಂಗ್ರೆಸ್‌‍ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಜಾರಿ ನಿರ್ದೇಶನಾಲಯಕ್ಕೆ ಸಾಂವಿಧಾನಿಕ ಪಾವಿತ್ರ್ಯತೆ ಇರಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌‍ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿದೆ. ಜಾರಿ ನಿರ್ದೇಶನಾಲಯದ ವೈಶಿಷ್ಟ್ಯವೇನೆಂದರೆ ಅದು ದಾಳಿ ಮಾಡುವುದು ಬಿಜೆಪಿಯೇತರ ನಾಯಕರ ಮೇಲೆ ಮಾತ್ರ. ಇಲ್ಲಿಯವರೆಗೂ ಇ.ಡಿ ಬಿಜೆಪಿ ನಾಯಕರ ತಂಟೆಗೆ ಹೋಗಿಲ್ಲ. ಹೋಗುವುದು ಇಲ್ಲ. ಇದೊಂದು ವಿಸಯ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌‍ ನಾಯಕರನ್ನೇ ನಿರ್ಧಿಷ್ಟವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸುವ ಜಾರಿ ನಿರ್ದೇಶನಾಲಯ ತನ್ನ ಹೆಸರನ್ನು ಕಾಂಗ್ರೆಸ್‌‍ ವಿರೋಧಿ ನಿರ್ದೇಶನಾಲಯ ಎಂದು ಬದಲಾಯಿಸಿಕೊಳ್ಳುವುದು ಸೂಕ್ತ. ಯಾಕೆಂದರೆ ಜಾರಿ ನಿರ್ದೇಶನಾಲಯದ ಪ್ರೈಮ್‌ ಟಾರ್ಗೆಟ್‌ ಕಾಂಗ್ರೆಸ್‌‍ ನಾಯಕರೆ ಹೊರತು ಬಿಜೆಪಿಯವರಲ್ಲ. ಇತ್ತೀಚೆಗಷ್ಟೆ ತಮಿಳುನಾಡಿನ ಟಿಎಎಸ್‌‍ಎಂಎಸಿ ಹಗರಣದಲ್ಲಿ ಇ.ಡಿ. ನಡೆಯನ್ನು ಸುಪ್ರೀಂ ಕೋರ್ಟ್‌ ಕಟು ಮಾತುಗಳಲ್ಲಿ ಟೀಕಿಸಿದೆ. ಇ.ಡಿ. ಎಲ್ಲಾ ಮಿತಿಗಳನ್ನು ಮೀರುತ್ತಿದೆ ಎಂದು ಸುಪ್ರೀಂ ಎಚ್ಚರಿಕೆ ನೀಡಿದೆ. ಆದರೂ ಇ.ಡಿ. ಅಧಿಕಾರಿಗಳು ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ.

ಸಾಂವಿಧಾನಿಕ ತನಿಖಾ ಸಂಸ್ಥೆಯಾದ ಇ.ಡಿ.ಯನ್ನು ಮೋದಿ ಸರ್ಕಾರ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಇ.ಡಿ. ರಾಜಕೀಯ ಪಕ್ಷವೊಂದರ ಆಜ್ಞಾಪಾಲಕರಾದರೆ ಆ ಸಂಸ್ಥೆಗೆ ಸಾಂವಿಧಾನಿಕ ಪಾವಿತ್ರ್ಯತೆ ಇರಲು ಹೇಗೆ ಸಾಧ್ಯ? ಆ ಸಂಸ್ಥೆಯಿಂದ ಪ್ರಜಾಪ್ರಭುತ್ವದ ಮೌಲ್ಯ ಉಳಿಯಲು ಹೇಗೆ ಸಾಧ್ಯ? ಎಂದು ಬರೆದುಕೊಂಡಿದ್ದಾರೆ.

RELATED ARTICLES

Latest News