Wednesday, May 1, 2024
Homeರಾಜ್ಯಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸುವಂತೆ ಮನವಿ

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸುವಂತೆ ಮನವಿ

ಬೆಂಗಳೂರು,ಜ.18- ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕರೆಂದು ಘೋಷಿಸಬೇಕೆಂದು ತಮ್ಮಲ್ಲಿ ಕೋರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದ್ದಾರೆ. ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಗುರು ಬಸವಣ್ಣನವರು ಅಸ್ಪಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕ.

ಕಲ್ಯಾಣದ ಅನುಭವ ಮಂಟಪದ 770 ಶರಣ-ಶರಣೇಯರನ್ನು ಹಾಗೂ ಸಾವಿರಾರು ಜಂಗಮರನ್ನು ಒಗ್ಗೂಡಿಸಿ ಕನ್ನಡದಲ್ಲಿ ವಚನ ಸಂಸ್ಕøತಿಯನ್ನು ಪಸರಿಸಿ, ಸಮಾನತೆಯ ಸಂದೇಶ ಸಾರಿದ್ದು ಗುರು ಬಸವಣ್ಣನವರು. 12ನೇ ಶತಮಾನದಲ್ಲಿಯೇ ಗುರು ಬಸವಣ್ಣನವರು ಅನುಭವ ಮಂಟಪದಲ್ಲಿ ಸರ್ವ ಸಮುದಾಯದ ಜನರಿಗೂ ಅವಕಾಶ ಕಲ್ಪಿಸಿ ಸಮಾನತೆಯನ್ನು ಪ್ರತಿಪಾದಿಸಿದ್ದರು. ಮುಂದೆ ಸ್ವಾತಂತ್ರದ ನಂತರ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‍ರವರು ಭಾರತ ಸಂವಿಧಾನವನ್ನು ರಚಿಸಿ ದೇಶದಲ್ಲಿ ಸರ್ವರಿಗೂ ಸಮಾನತೆಯನ್ನು ಕಲ್ಪಿಸಿದರು.

ಸೂಕ್ತ ಸರ್ಕಾರಿ ನಿವಾಸಕ್ಕಾಗಿ ಸರ್ಕಾರಕ್ಕೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ್‍

ಕಾಯಕವೇ ಕೈಲಾಸ, ಅರಿವೇ ಗುರು ಎಂದು ಸಾಮಾಜಿಕ ಪ್ರಜ್ಞೆ ಮೂಡಿಸಲು ತಮ್ಮ ಜೀವನವಿಡಿ ಶ್ರಮಿಸಿದ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕರೆಂದು ಅಕೃತವಾಗಿ ಘೋಷಿಸುವುದರಿಂದ ಇಡೀ ನಾಡಿಗೆ ಸಂತಸವನ್ನು ಉಂಟು ಮಾಡುವುದಲ್ಲದೇ ನಮ್ಮ ರಾಜ್ಯ ಸರ್ಕಾರದ ಗರಿಮೆಯನ್ನು ಹೆಚ್ಚಿಸಿದಂತಾಗುತ್ತದೆ. ಮಹಾರಾಷ್ಟ್ರ ಸರ್ಕಾರವು ಶಿವಾಜಿ ಮಹಾರಾಜರವರನ್ನು ಆ ರಾಜ್ಯದಲ್ಲಿ ಸಾಂಸ್ಕøತಿಕ ನಾಯಕ ಎಂದು ಘೋಷಿಸಿರುವ ಉದಾಹರಣೆ ಈಗಾಗಲೇ ಇರುತ್ತದೆ.

RELATED ARTICLES

Latest News