ಬೆಂಗಳೂರು, ಏ.23– ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಕೃತ್ಯ ಅತ್ಯಂತ ಹೇಯ ಹಾಗೂ ಅಮಾನವೀಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತೀವ್ರವಾಗಿ ಖಂಡಿಸಿದ್ದಾರೆ.
ಈ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಮಂದಿ ಬಲಿಯಾಗಿರುವುದು ಅತೀವ ನೋವು ತಂದಿದೆ. ಪಹಲ್ಗಾಮ್ ಉಗ್ರರ ದಾಳಿಯ ಹಿಂದಿನ ಶಕ್ತಿಗಳನ್ನು ಭಾರತೀಯರೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಮ್ಮು- ಕಾಶ್ಮೀರ ದಲ್ಲಿ 370 ವಿಧಿ ರದ್ದುಗೊಂಡ ನಂತರ ಶಾಂತಿ ನೆಲೆಸಿದೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ದೇಶದ ಭದ್ರತೆಯ ವಿಚಾರದಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕಿದೆ. ಕೃತ್ಯದಲ್ಲಿ ಬಲಿಯಾದವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಅವರು ಹೇಳಿದರು.
- ಮೆಡಿಕಲ್ ಎಮರ್ಜೆನ್ಸಿ: ಬೆಂಗಳೂರಿನಲ್ಲಿ ಡ್ರೋನ್ ಸೇವೆ ಆರಂಭ
- ಉರುಗ್ವೆ ದೇಶದಲ್ಲಿ ದಯಾಮರಣಕ್ಕೆ ಅವಕಾಶ ನೀಡುವ ಕಾನೂನು ಅಂಗೀಕಾರ
- ಎಟಿಎಂನಿಂದ 6.18 ಲಕ್ಷ ರೂ. ಹಣ ಮಾಯ
- ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ ನಿರಾಕರಣೆ
- ಬೆಂಗಳೂರು ರಸ್ತೆಗುಂಡಿ, ಉದ್ಯಮಗಳ ಸ್ಥಳಾಂತರದ ಬಗ್ಗೆ ಆಂಧ್ರ ಸಚಿವ ನಾರಾ ಲೋಕೇಶ್ ಹೊಸ ಬಾಂಬ್..!