Friday, March 29, 2024
Homeರಾಜ್ಯ"ಪಕ್ಷ ತೊರೆಯುತ್ತಿರುವವರ ಸಮಾಧಾನಕ್ಕೆ ಹೆಚ್ಡಿಕೆ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ"

“ಪಕ್ಷ ತೊರೆಯುತ್ತಿರುವವರ ಸಮಾಧಾನಕ್ಕೆ ಹೆಚ್ಡಿಕೆ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ”

ರಾಯಚೂರು,ಅ.1- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದಂತೆ 6 ತಿಂಗಳಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗುವುದಿಲ್ಲ, 5 ವರ್ಷ ಅಧಿಕಾರವ ಪೂರ್ಣಗೊಳಿಸಲಿದೆ ಎಂದು ಸಣ್ಣ ನೀರಾವರಿ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೊಂದಿಗಿನ ಮೈತ್ರಿಯಿಂದ ಅಸಮಾಧಾನಗೊಂಡು ಜೆಡಿಎಸ್‍ನ ಬಹಳಷ್ಟು ನಾಯಕರು ಪಕ್ಷ ತೊರೆಯುತ್ತಿದ್ದಾರೆ. ಅವರಿಗೆ ಧೈರ್ಯ ಹೇಳುವ ಸಲುವಾಗಿ ಕುಮಾರಸ್ವಾಮಿ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂಬ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ ಎಂದು ಲೇವಡಿ ಮಾಡಿದರು.

ಈ ಹಿಂದೆ ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿದ್ದಾಗ ಅದನ್ನು ಉಳಿಸಿಕೊಳ್ಳಲಾಗಲಿಲ್ಲ. ಕಾಂಗ್ರೆಸ್‍ನ ಎಲ್ಲರೂ ಕುಮಾರಸ್ವಾಮಿಯವರಿಗೆ ಬೆಂಬಲ ನೀಡಿದ್ದರು. ಶಕ್ತಿ ಇದ್ದರೆ ಅವರು ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಬಹುದಿತ್ತು. ಆದರೆ ಕುಮಾರಸ್ವಾಮಿಯವರಿಂದ ಅದು ಸಾಧ್ಯವಾಗಲಿಲ್ಲ ಎಂದರು.

ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ, ತಾಯಿ ಸೇರಿ ಮೂವರೂ ನೀರುಪಾಲು

ಕುಮಾರಸ್ವಾಮಿ ಅವರಿಗೆ ಪಕ್ಷ ಉಳಿಸಿಕೊಳ್ಳಬೇಕಿದೆ. ಅಸ್ತಿತ್ವದ ಪ್ರಶ್ನೆ ಕಾಡುತ್ತಿದೆ. ಹೀಗಾಗಿ ಕಾರ್ಯಕರ್ತರಿಗೆ ಧೈರ್ಯ ಹೇಳಲು ಅರ್ಥವಿಲ್ಲದ ಮಾತುಗಳನ್ನಾಡುತ್ತಿದ್ದಾರೆ. ಅದಕ್ಕೆ ಒತ್ತು ನೀಡಬೇಕಿಲ್ಲ. ಪ್ರತಿಯೊಂದರಲ್ಲೂ ಹಿಟ್ ಅಂಡ್ ರನ್ ಧೋರಣೆ ಅನುಸರಿಸುತ್ತಾರೆ ಎಂದು ತಿರುಗೇಟು ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರರನ್ನು ವರುಣ ಕ್ಷೇತ್ರದ ಶಾಸಕ ಎಂದು ಎಲ್ಲಿಯೂ ಹೇಳಿಲ್ಲ. ಸಹಜವಾಗಿ ರಾಜಕಾರಣಿಗಳು ಕ್ಷೇತ್ರದ ಜನ ಬಂದಾಗ ಈ ರೀತಿ ಮಾತನಾಡುವುದು ಸರ್ವೆ ಸಾಮಾನ್ಯ. ಈ ಹಿಂದೆ ದೇವೇಗೌಡರು ಪ್ರಧಾನಿಯಾಗಿದ್ದಾಗ ಕುಮಾರಸ್ವಾಮಿ ಹೇಗೆಲ್ಲಾ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದರು ಎಂದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.

RELATED ARTICLES

Latest News