ಚಿಕ್ಕಮಗಳೂರು, ಜು.5– ಇತ್ತೀಚಿಗೆ ಕಣ್ಮರೆಯಾಗಿದ್ದ ಅರಣ್ಯ ಇಲಾಖೆಯ ಗಾರ್ಡ್ ಶರತ್ನ ಮೃತದೇಹ ಪತ್ತೆಯಾಗಿದೆ.ಶರತ್ ಸಖರಾಯಪಟ್ಟಣದ ಸಮೀಪ ಹೊಸದಾಗಿ ನಿರ್ಮಾಣವಾಗುತ್ತಿರುವ ಟೋಲ್ ಗೇಟ್ ಬಳಿಯ ನೀಲಗಿರಿ ಫಾರೆಸ್ಟ್ ತೋಪಿನಲ್ಲಿ ಮೃತದೇಹ ಪತ್ತೆಯಾಗಿದೆ. ಶರತ್ನ ಮೃತದೇಹ ಸಂಪೂರ್ಣ ಕೊಳೆತು ಹೋಗಿದೆ.
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದು ಪತ್ತೆಗಾಗಿ ಪೊಲೀಸ್ ಮತ್ತು ಅರಣ್ಯ ಇಲಾಖೆಯವರು ತೀವ್ರ ಪ್ರಯತ್ನ ನಡೆಸಿದ್ದು ದ್ರೋಣ ಕ್ಯಾಮರಾ ಕೂಡ ಬಳಸಿದರೂ ಸುಳಿವು ಸಿಕ್ಕಿರಲಿಲ್ಲ. ಇಂದು ಹೆಚ್ಚು ಸಿಬ್ಬಂದಿಯೊಂದಿಗೆ ತಪಾಸಣೆ ನಡೆಸಿದ್ದು ದುರ್ವಾಸನೆ ಬಂದ ಕಡೆ ಹೋಗಿ ನೋಡಿದಾಗ ಶರತ್ನ ಮೃತದೇಹ ಪತ್ತೆಯಾಗಿದೆ.
ಕೊಡಗು ಮೂಲದ ಶರತ್ ಕಳೆದ ಆರು ತಿಂಗಳ ಹಿಂದೆ ಚಿಕ್ಕಮಗಳೂರು ಅರಣ್ಯ ವಿಭಾಗಕ್ಕೆ ವರ್ಗಾವಣೆಯಾಗಿ ಬಂದಿದ್ದು ಸದಾ ಕುಡಿತದ ಅಮಲಿನಲ್ಲಿ ಇರುತ್ತಿದ್ದ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
- ಹಾಸನದಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳಿಗೆ ಕಾರಣವೇನು..? ಇಂದು ಜಿಲ್ಲಾಧಿಕಾರಿಗಳ ಕೈಸೇರಲಿದೆ ಅಧ್ಯಯನದ ವರದಿ
- ರಾಜ್ಯ ರಾಜಕಾರಣಕ್ಕೆ ಬರ್ತಾರಾ ಮಲ್ಲಿಕಾರ್ಜುನ ಖರ್ಗೆ..? ಸದ್ದಿಲ್ಲದೆ ನಡೆಯುತ್ತಿದೆಯಾ ಕಾರ್ಯಾಚರಣೆ..?
- ಮದುವೆ ಇಲ್ಲದೆ ತಾಯಿಯಾಗುವ ಮೂಲಕ ನಟಿ ಭಾವನಾ ರಾಮಣ್ಣ ಹೊಸ ಹೆಜ್ಜೆ
- ಕ್ರಿಕೆಟಿಗ ಮೊಹಮ್ಮದ್ ಶಮಿ ವಿರುದ್ಧ ಮಾಜಿ ಪತ್ನಿ ಮತ್ತೊಂದು ಗಂಭೀರ ಆರೋಪ
- ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ : ಮದುವೆಗೆ ತೆರಳುತ್ತಿದ್ದ ವರ ಹಾಗೂ ಮಕ್ಕಳು ಸೇರಿ 8 ಮಂದಿ ಸಾವು