ಉಡುಪಿ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಶಾಸಕ ರಘುಪತಿ ಭಟ್

Social Share

ಬೆಂಗಳೂರು,ಫೆ.15- ಉಡುಪಿ ಜಿಲ್ಲಾ ಮಟ್ಟದಲ್ಲಿ ಯಾವುದೇ ರೀತಿಯ ಸಮಸ್ಯೆಇಲ್ಲ ಎಂದು ಶಾಸಕ ರಘುಪತಿ ಭಟ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಸಭೆಯನ್ನು ಸಹ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಇರುವುದೇ ಶಿಕ್ಷಕರಿಗೂ ಅನ್ವಯವಾಗುತ್ತದೆ ಎಂದು ಹಿಜಾಬ್-ಕೇಸರಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು.
ನಮ್ಮ ಸರ್ಕಾರಿ ಶಾಲೆಯಲ್ಲೇ ಹಿಜಾಬ್ ವಿವಾದ ಉಂಟಾಗಿತ್ತು. ಒಂದು ಕೋಮಿನ ವಿದ್ಯಾರ್ಥಿನಿಯರು ಪ್ರತಿಭಟಿಸಿದ್ದರು. ಪ್ರತಿಭಟನೆ ಮಾಡಿದವರು ಶೇ.1ರಷ್ಟು ಇಲ್ಲ. ಹೀಗಾಗಿ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Articles You Might Like

Share This Article