ಅಹಮದಾಬಾದ್,ಮೇ7 – ದೇಶದಲ್ಲಿ 3ನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಮತದಾನ ಅನ್ನೋದು ಸಾಮಾನ್ಯ ದಾನ ಅಲ್ಲ, ಶ್ರೀಷ್ಠ ದಾನಗಳಲ್ಲಿ ಒಂದು. ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ. ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕು ಎಂದು ಪ್ರಧಾನಿ ನರೇಂದ್ರಮೋದಿ ದೇಶದ ಮತದಾರರಿಗೆ ಕರೆಕೊಟ್ಟರು.
ಅಹಮದಾಬಾದ್ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಸಕ್ರಿಯ ಭಾಗಿತ್ವ ಚುನಾವಣೆಯನ್ನು ಮತ್ತಷ್ಟು ರೋಮಾಂಚನಗೊಳಿಸುತ್ತದೆ. ಮತದಾನದ ವೇಳೆ ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ಕೆ ಅಭಿನಂದನೆ. ಬಿಸಿಲಿನ ತಾಪ ಹೆಚ್ಚಿದ್ದು ಮತದಾರರು ಹೆಚ್ಚು ನೀರು ಕುಡಿದು ದಣಿವಾರಿಸಿಕೊಳ್ಳಿ ಎಂದರು.
![](https://eesanje.com/wp-content/uploads/2024/05/image-4-1024x576.png)
ಮಾಧ್ಯಮ ಪ್ರತಿನಿಧಿ ಗಳು ಹಗಲು-ರಾತ್ರಿ ಎನ್ನದೆ ಸುದ್ದಿ ಪ್ರಸಾರ ಮಾಡುತ್ತೀರಿ. ಬಿಸಿಲು ಜಾಸ್ತಿ ಇದೆ, ನಿಮ್ಮ ಆರೋಗ್ಯದ ಬಗ್ಗೆ ಲಕ್ಷ ವಹಿಸಿ. ನೀರು ಜಾಸ್ತಿ ಕುಡಿಯಿರಿ ಎಂದು ಸಲಹೆ ನೀಡಿದರು.
ಕನ್ನಡದಲ್ಲಿ ಟ್ವೀಟ್: ಮತ ಚಲಾಯಿಸುವುದಕ್ಕೂ ಮುನ್ನ ಪ್ರಧಾನಿ ಮೋದಿ, ಸಾಮಾಜಿಕ ಜಾಲತಾಣ ಎಕ್್ಸ ಖಾತೆಯಲ್ಲಿ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಿ. ಮತದಾರರ ಸಕ್ರಿಯ ಭಾಗವಹಿಸುವಿಕೆ ಚುನಾವಣೆಯನ್ನು ಮತ್ತಷ್ಟು ಮಾಂಚಕಗೊಳಿಸುತ್ತದೆ ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಪ್ರಧಾನಿ ಮೋದಿಯವರು ಬರುತ್ತಿದ್ದಂತೆ ಮತಗಟ್ಟೆ ಬಳಿ ನೆರೆದಿದ್ದ ಜನರು ಮೋದಿ ಮೋದಿ ಅಂತ ಕೂಗಲು ಆರಂಭಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಮತದಾನ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ವಿಶೇಷವಾಗಿತ್ತು.
![](https://eesanje.com/wp-content/uploads/2024/05/image-5.png)