Thursday, May 9, 2024
Homeರಾಷ್ಟ್ರೀಯಲೋಕಸಭೆ ಚುನಾವಣೆ ಕಣಕ್ಕೆ ಮೊಹಮ್ಮದ್ ಶಮಿ..?

ಲೋಕಸಭೆ ಚುನಾವಣೆ ಕಣಕ್ಕೆ ಮೊಹಮ್ಮದ್ ಶಮಿ..?

ನವದೆಹಲಿ,ಮಾ.8-ಪಶ್ಚಿಮ ಬಂಗಾಳದಿಂದ ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಬಿಜೆಪಿ ಮೂಲಗಳ ಪ್ರಕಾರ, ಶಮಿಯನ್ನು ಬಸಿರ್ಹತ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವುದು ಮೊದಲ ಆದ್ಯತೆಯಾಗಿದ್ದು, ಇದೇ ಕ್ಷೇತ್ರದ ವ್ಯಾಪ್ತಿಗೆ ಬರುವ ಸಂದೇಶಖಾಲಿ ಗ್ರಾಮವು ಹಿಂಸಾಚಾರಕ್ಕೆ ಸಾಕ್ಷಿಯಾದ ನಂತರ ಸುದ್ದಿಯಾಗಿತ್ತು.

ಈ ಪ್ರಸ್ತಾವನೆಯನ್ನು ಬಿಜೆಪಿ ನಾಯಕತ್ವ ಶಮಿಗೆ ತಲುಪಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಅವರು ಈವರೆಗೂ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಲಾಗಿದೆ. ಶಮಿ ರಣಜಿ ಟ್ರೋಫಿಯಲ್ಲಿ ಬಂಗಾಳವನ್ನು ಪ್ರತಿನಿಧಿಸುತ್ತಿದ್ದು, ರಾಜ್ಯಕ್ಕಾಗಿ ದೇಶೀಯ ಕ್ರಿಕೆಟ್‍ನಲ್ಲಿ ಆಡುವುದನ್ನು ಮುಂದುವರೆಸಿದ್ದಾರೆ.

ಭಾರತದ ವಿಶ್ವಕಪ್ ಅಭಿಯಾನದ ನಂತರ ಶಮಿ ಅವರು ಕ್ರಿಕೆಟ್ ಆಡಿಲ್ಲ, ಅವರು ಏಳು ಪಂದ್ಯಗಳಲ್ಲಿ 10.70 ಸರಾಸರಿ ಮತ್ತು 12.20 ಸ್ಟ್ರೈಕ್ ರೇಟ್‍ನಲ್ಲಿ 24 ವಿಕೆಟ್‍ಗಳನ್ನು ಪಡೆಯುವ ಮೂಲಕ ತಂಡವನ್ನು ಫೈನಲ್ ತಲುಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್‍ನಲ್ಲಿ ಸೋತ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಆಟಗಾರರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಧೈರ್ಯ ತುಂಬಿದ್ದರು. ಪಂದ್ಯಾವಳಿಯಲ್ಲಿ ಮೊಹಮ್ಮದ್ ಶಮಿ ಅವರ ಸಂವೇದನಾಶೀಲ ಪ್ರದರ್ಶನವನ್ನು ಹೊಗಳಿದ ಅವರು ಆಟಗಾರನನ್ನು ತಬ್ಬಿಕೊಂಡರು. ಈ ವಿಡಿಯೋ ವಿಡಿಯೋ ವೈರಲ್ ಆಗಿತ್ತು.

ಮೂಲಗಳ ಪ್ರಕಾರ ಶಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇದಲ್ಲದೇ ಶಮಿ ಅವರ ಹುಟ್ಟೂರು ಅಮ್ರೋಹಾದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದರು.

ಬಿಜೆಪಿಯ ಉನ್ನತ ಮೂಲಗಳ ಪ್ರಕಾರ,ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಶಮಿ ಅವರನ್ನು ಅಭ್ಯರ್ಥಿಯಾಗಿ ಪ್ರಸ್ತಾಪಿಸಲಾಗಿದೆ ಮತ್ತು ಚರ್ಚೆಗಳು ಸಕಾರಾತ್ಮಕವಾಗಿವೆ. ಬಿಜೆಪಿಯೊಳಗಿನ ಆಂತರಿಕ ಚರ್ಚೆಗಳು ಶಮಿಯನ್ನು ಕಣಕ್ಕಿಳಿಸುವುದು ಬಂಗಾಳದ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಗೆಲುವು ಸಾಧಿಸಲು ಸಹಾಯ ಮಾಡುತ್ತದೆ ಎಂಬ ಲೆಕ್ಕಚಾರವಿದೆ.

RELATED ARTICLES

Latest News