ಜುಲೈ 15ರಿಂದ ಮಳೆಗಾಲದ ಅಧಿವೇಶನ

ಬೆಂಗಳೂರು, ಜು.3– ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನವು ಜುಲೈ 15ರಿಂದ ಪ್ರಾರಂಭವಾಗಲಿದೆ.ಜುಲೈ 15ರಿಂದ ಜು.26ರವರೆಗೆ 9ದಿನಗಳ ಮಳೆಗಾಲದ ಅಧಿವೇಶನವನ್ನು ನಡೆಸಲು ನಿಗದಿಪಡಿಸಲಾಗಿದೆ. ಜುಲೈ 15ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸಭೆ ಅಧಿವೇಶನ ಸಮಾವೇಶಗೊಳ್ಳುವಂತೆ ರಾಜ್ಯಪಾಲರು ಆದೇಶಿಸಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜುಲೈ 26 ನಂತರ ಅಧಿವೇಶನವನ್ನು ವಿಸ್ತರಣೆ ಮಾಡುವ ಅಥವಾ ಮುಕ್ತಾಯಗೊಳಿಸುವ ಬಗ್ಗೆ ಸದನದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ.ಕಳೆದ ಸಚಿವ ಸಂಪುಟ ಸಭೆಯಲ್ಲಿ … Continue reading ಜುಲೈ 15ರಿಂದ ಮಳೆಗಾಲದ ಅಧಿವೇಶನ