ಹಾರೋಹಳ್ಳಿ, ಜು.26- ಮಗನ ಸಾವಿನಿಂದ ಮನನೊಂದ ತಾಯಿಯೊಬ್ಬರು ಮಗನ ಹನ್ನೊಂದನೇ ದಿನದ ತಿಥಿ ಕಾರ್ಯದ ದಿನವೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದ ಜನತಾ ಕಾಲೋನಿಯಲ್ಲಿ ನಡೆದಿದೆ.
ಹೊಂಬಮ್ಮ (55) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪುತ್ರ ಮೋಹನ್ಕುಮಾರ್(26) ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದ. ಐ.ಎ.ಎಸ್ ಪರೀಕ್ಷೆ ಬರೆದು, ಉನ್ನತ ಹುದ್ದೆಗೆ ತೆರಳುವ ಕನಸು ಕಾಣುತ್ತಿದ್ದ ತಾಯಿಗೆ ಮಗನ ಸಾವು ಆಘಾತವನ್ನು ಉಂಟು ಮಾಡಿದೆ. ನೋವನ್ನು ತಾಳಲಾರದೆ ದುಃಖದಲ್ಲಿಯೇ ಕಾಲ ಕಳೆಯುತ್ತಿದ್ದರು.
ಮಗನ ಸಾವಿನಿಂದ ಮನನೊಂದು ಮಗನ ತಿಥಿ ಕಾರ್ಯದಂದೇ ಮನೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾರೋಹಳ್ಳಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
- ಮಾಜಿ ಸೈನಿಕನ ಪೊಲೀಸರಿಂದ ಮೇಲೆ ಹಲ್ಲೆ, ಕಮಿಷನರ್ಗೆ ದೂರು
- ವಿದ್ಯಾರ್ಥಿಗಳ ಉತ್ತೀರ್ಣ ಕನಿಷ್ಠ ಅಂಕ ಇಳಿಕೆ ಬೇಡ : ಸಭಾಪತಿ ಬಸವರಾಜ ಹೊರಟ್ಟಿ
- ಹೆಚ್ಡಿಕೆ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ಡಿಕೆಶಿ ವಿರುದ್ಧ ಜೆಡಿಎಸ್ ಪ್ರತಿಭಟನೆ
- ಹಂತಹಂತವಾಗಿ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ : ಸಚಿವ ಸತೀಶ್ ಜಾರಕಿಹೊಳಿ
- RSS ಪಥಸಂಚನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತಿಗೆ ಕೆಎಟಿ ತಡೆ, ಸರ್ಕಾರಕ್ಕೆ ಮತ್ತೊಂದು ಹಿನ್ನಡೆ
