Thursday, July 4, 2024
Homeಜಿಲ್ಲಾ ಸುದ್ದಿಗಳುರಸ್ತೆ ಅಪಘಾತದಲ್ಲಿ ಗಾಯಗೊಂಡ ದಂಪತಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ ಸಂಸದ ಡಾ.ಸಿ.ಎನ್‌.ಮಂಜುನಾಥ್‌

ರಸ್ತೆ ಅಪಘಾತದಲ್ಲಿ ಗಾಯಗೊಂಡ ದಂಪತಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ ಸಂಸದ ಡಾ.ಸಿ.ಎನ್‌.ಮಂಜುನಾಥ್‌

ಕನಕಪುರ,ಜೂ.18- ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ದಂಪತಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ನೂತನ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅವರು ಪ್ರಥಮ ಚಿಕಿತ್ಸೆ ಮಾಡಿ ಆಸ್ಪತ್ರೆಗೆ ದಾಖಲಿಸಿ ಅಲ್ಲೂ ಕೂಡ ಮಾನವೀಯತೆ ಮೆರೆದಿದ್ದಾರೆ.

ಮೈಸೂರು ರಸ್ತೆಯಲ್ಲಿ ಬರುತ್ತಿರುವ ಮಾರ್ಗಮಧ್ಯೆ ಅಪಘಾತವಾಗಿ ನರಳುತಿದ್ದ ದಂಪತಿಗಳನ್ನು ಗಮನಿಸಿ ತಮ ವಾಹನ ನಿಲ್ಲಿಸಿ ಸ್ಥಳಕ್ಕೆ ತೆರಳಿ ಗಾಯಾಳು ದಂಪತಿಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಆನೆಕಲ್‌ ತಾಲೂಕು ದಂಪತಿ ಮುನಿವೀರಪ್ಪ ಮತ್ತು ಮುನಿರತ್ನಮ ಸಾತನೂರು ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಹೆದ್ದಾರಿ ಬಳಿಯ ಬಟ್ಟಲುಗುಂಡಪ್ಪ ಬೆಟ್ಟದ ಸಮೀಪ ಟಿಟಿ ವಾಹನ ಅಪಘಾತ ಮಾಡಿ ಹೋಗಿತ್ತು.

ಅದೇ ವೇಳೆಗೆ ಪ್ರಸಿದ್ಧ ಗ್ರಾಮದೇವತೆ ಕಬ್ಬಾಳಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಸಂಜೆ ವಾಪಸ್‌‍ ತೆರಳುವಾಗ ಅಪಘಾತದಲ್ಲಿ ಬಿದ್ದು ನರಳುತಿದ್ದವರನ್ನು ನೋಡಿದ ಸಂಸದ ಸಿ ಎನ್‌ ಮಂಜುನಾಥ್‌ ಕೂಡಲೇ ಅವರನ್ನು ಪರೀಕ್ಷಿಸಿ ಆಟೋ ಮೂಲಕ ನಗರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ತಕ್ಷಣ ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ .ನರಸಿಂಹಮೂರ್ತಿಯವರನ್ನುೆ ದೂರವಾಣಿ ಮೂಲಕ ಸಂರ್ಪಕಿಸಿ ಆಟೋರಿಕ್ಷಾದಲ್ಲಿ ಕಳುಹಿಸುತ್ತಿರುವುದಾಗಿ ಹೇಳಿ ಅವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.ಸಂಸದರ ಈ ಸಹಾದ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿ ವ್ಯಾಪಕ ಶ್ಲಾಘನೆಗಳು ಕೇಳಿಬರುತ್ತಿವೆ.

RELATED ARTICLES

Latest News