Sunday, April 28, 2024
Homeರಾಜ್ಯಸಂಸದ ಪುತ್ರನ ಲವ್ವಿ-ಡವ್ವಿ ಪ್ರಕರಣ ಮೈಸೂರಿಗೆ ಹಸ್ತಾಂತರಿಸಲು ಸಿದ್ಧತೆ

ಸಂಸದ ಪುತ್ರನ ಲವ್ವಿ-ಡವ್ವಿ ಪ್ರಕರಣ ಮೈಸೂರಿಗೆ ಹಸ್ತಾಂತರಿಸಲು ಸಿದ್ಧತೆ

ಬೆಂಗಳೂರು, ನ.18- ಬಳ್ಳಾರಿ ಸಂಸದ ದೇವೇಂದ್ರಪ್ಪರ ಪುತ್ರ, ಉಪನ್ಯಾಸಕ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸ್ನೇಹ, ಪ್ರೀತಿ, ವಂಚನೆ ಪ್ರಕರಣವನ್ನು ಮೈಸೂರಿಗೆ ವರ್ಗಾಯಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಬೆಂಗಳೂರಿನ ವಿಜಯನಗರದ ನಿವಾಸಿ, 24 ವರ್ಷದ ಸಂತ್ರಸ್ತೆ ದೂರು ನೀಡಿದ್ದು, ಉಪನ್ಯಾಸಕನ ಜೊತೆ ಆಕೆಗೆ ಮೈಸೂರಿನಲ್ಲಿ ಒಡನಾಟವಿದುದ್ದು. ಬೆಂಗಳೂರಿನಲ್ಲಿ ಈ ಸಂಬಂಧ ಯಾವುದೇ ದಾಖಲೆಗಳಿಲ್ಲ. ಹಾಗಾಗಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಈ ಪ್ರಕರಣವನ್ನು ಮೈಸೂರಿಗೆ ವರ್ಗಾವಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯಲ್ಲಿನ ಬೆಂಕಿಗೆ ತುಪ್ಪ ಸುರಿದಂತೆ: ಸಚಿವ ಖರ್ಗೆ

ಉಪನ್ಯಾಸಕ ರಂಗನಾಥ್ ಆಕೆಯ ಸ್ನೇಹ ಬೆಳೆಸಿ ಮದುವೆಯಾಗುವುದಾಗಿ ನಂಬಿಸಿ ಮೈಸೂರಿಗೆ ಕರೆಸಿಕೊಂಡು ಅಲ್ಲಿನ ಹೊಟೇಲ್‍ಗೆ ಕರೆದೊಯ್ದು ಲೈಂಗಿಕ ಸಂಪರ್ಕ ಹೊಂದಿ ನಂತರ ಆಕೆಗೆ ವಂಚಿಸಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ತನಿಖೆ ಕೈಗೊಂಡಿರುವ ಪೊಲೀಸರು, ಈ ಪ್ರಕರಣವನ್ನು ಇದೀಗ ಮೈಸೂರು ನಗರ ಪೊಲೀಸರಿಗೆ ವರ್ಗಾಯಿಸಲು ಸಿದ್ಧತೆ ನಡೆಸಿದ್ದಾರೆ.

ಈ ನಡುವೆ ಯುವತಿಯು ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಕೊಡುವಂತೆ ಬ್ಲಾಕ್‍ಮೇಲ್ ಮಾಡುತ್ತಿದ್ದಾರೆಂದು ಆಕೆ ವಿರುದ್ಧ ರಂಗನಾಥ್ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

RELATED ARTICLES

Latest News