Tuesday, June 24, 2025
Homeಬೆಂಗಳೂರುಜು.7ರಂದು ಸಾಮೂಹಿಕ ಪ್ರತಿಭಟನೆಗೆ ಮಹಾನಗರ ಪಾಲಿಕೆಗಳ ನೌಕರರ ನಿರ್ಧಾರ

ಜು.7ರಂದು ಸಾಮೂಹಿಕ ಪ್ರತಿಭಟನೆಗೆ ಮಹಾನಗರ ಪಾಲಿಕೆಗಳ ನೌಕರರ ನಿರ್ಧಾರ

Municipal Corporation Employees Decide to Protest on July 7

ಬೆಂಗಳೂರು,ಜೂ. 24-ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರು ಸಾಮೂಹಿಕ ರಜೆ ಹಾಕಿ ಜುಲೈ 7ರಂದು ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ಹಾಘೂ ಮಹಾನಗರ ಪಾಲಿಕೆಯ 10 ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಹಲವಾರು ಬಾರಿ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಹೋರಾಟದ ಹಾದಿ ಹಿಡಿಯಬೇಕಾಯಿತು ಎಂದು ಸಂಘದ ಅಧ್ಯಕ್ಷ ಅಮೃತ್‌ರಾಜ್‌ ತಿಳಿಸಿದ್ದಾರೆ.

ಹೀಗಾಗಿ ಜು.7 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಲ್ಲಾ ಮಹಾನಗರ ಪಾಲಿಕೆಯ ಅಧಿಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಿ ಬೃಹತ್‌ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಯಥಾವತ್ತಾಗಿ ಸರ್ಕಾರ ಆರ್ಥಿಕ ಇಲಾಖೆಯಿಂದಲೇ ಅನುಧಾನವನ್ನು ಬಿಡುಗಡೆ ಮಾಡಬೇಕು. ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆ.ಜಿ.ಐ.ಡಿ ಮತ್ತು ಜಿ.ಪಿ.ಎಫ್‌ ಸೌಲಭ್ಯವನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಜಾರಿಗೊಳಿಸುವುದು ನಮ ಪ್ರಮುಖ ಬೇಡಿಕೆಯಾಗಿದೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ ಮತ್ತು ಆರೋಗ್ಯ ಸಂಜೀವಿನಿಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಜಾರಿಗೊಳಿಸಬೇಕು.ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಆಯೋಜಿಸಬೇಕು.ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರು ಸುಮಾರು ವರ್ಷಗಳಿಂದ ವಿವಿಧ ವೃಂದದ ಹುದ್ದೆಗಳನ್ನು ಮುಂಬಡ್ತಿ ಪಡೆಯಲು ವಂಚಿತರಾಗಿರುವುದರಿಂದ ಕೂಡಲೇ ವೃಂದವಾರು ಮುಂಬಡ್ತಿ ನೀಡಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

ಈ ಬೃಹತ್‌ ಪ್ರತಿಭಟನೆಯಲ್ಲಿ ರಾಜ್ಯದ 10ಮಹಾನಗರ ಪಾಲಿಕೆಗಳ ಸಾವಿರಾರು ಅಧಿಕಾರಿ, ನೌಕರರು ಭಾಗವಹಿಸಲಿದ್ದಾರೆ. ಗೌರವಾಧ್ಯಕ್ಷ ಎಸ್‌‍.ಹೆಚ್‌‍.ಗುರುಮೂರ್ತಿ, ರಾಜ್ಯ ಉಪಾಧ್ಯಕ್ಷರುಗಳಾದ ಜಿ.ವೆಂಕಟ್‌ ರಾಮ್‌‍, ವೇಣುಗೋಪಾಲ್‌ ಬಿ.ಎನ್‌‍. ಮತ್ತು ಪ್ರಧಾನ ಕಾರ್ಯದರ್ಶಿ ಟಿ.ಸಿ.ಬಸವರಾಜಯ್ಯ, ಖಜಾಂಚಿ ರುದ್ರೇಶ್‌ ಬಿ ಹಾಗೂ ರಾಜ್ಯ ಕಾರ್ಯದರ್ಶಿ ಪ್ರಹ್ಲಾದ್‌ ಕುಲಕರ್ಣಿ, ರಾಜ್ಯ ನಿರ್ದೇಶಕರುಗಳಾದ ಸಾಯಿಶಂಕರ್‌, ಜಗದೀಶ್‌ ಎಸ್‌‍, ಎ.ಜಿ.ಬಾಬು, ಶ್ರೀನಿವಾಸ್‌‍ ಕಟ್ಟಿ, ಬಾಬು ಪಿ, ನರಸಿಂಹ ಕೆ, ಶಾಂತಪ್ಪ ಮುಖೇಶಪ್ಪ ಪತ್ತಾರ, ರವೀಂದ್ರ ಶಿರಶ್ಯಾದ ಮತ್ತು 10ಮಹಾನಗರ ಪಾಲಿಕೆಗಳ ಅಧ್ಯಕ್ಷರು, ಪದಾಧಿಕಾರಿಗಳು , ಸದಸ್ಯರುಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

RELATED ARTICLES

Latest News