ನಾಗಮಂಗಲ ಗಲಭೆ : ಕರ್ತವ್ಯ ನಿರ್ಲಕ್ಷ್ಯದ ಆರೋಪದಲ್ಲಿ ಇನ್ಸ್‌ಪೆಕ್ಟರ್‌ ಅಶೋಕ್‌ ಕುಮಾರ್‌ ಅಮಾನತು

ಬೆಂಗಳೂರು,ಸೆ.13- ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್‌‍ ಇನ್ಸ್ ಪೆಕ್ಟರ್‌ ಅಶೋಕ್‌ ಕುಮಾರ್‌ನನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.ಸದಾಶಿವನಗರದ ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ಮೆರವಣಿಗೆ ಹೊರಡಬೇಕಿದ್ದ ದಾರಿಯನ್ನು ಮುಂಚಿತವಾಗಿ ನೀಡಲಾಗಿತ್ತು. ಇದನ್ನು ಇನ್‌ಸ್ಪೆಕ್ಟರ್‌ ಬದಲಾಯಿಸಿದ್ದರು ಎಂದರು. ಯಾವುದೇ ಘಟನೆಗಳಾದರೆ ನಿಮನ್ನೇ ಹೊಣೆ ಮಾಡುವುದಾಗಿ ಪೊಲೀಸ್‌‍ ಅಧಿಕಾರಿಗಳಿಗೆ ಮೊದಲೇ ಎಚ್ಚರಿಸಿದ್ದೇವೆ. ಡಿವೈಎಸ್‌‍ಪಿ ಮೇಲೂ ತನಿಖೆ ನಡೆಯುತ್ತಿದೆ. ಘಟನೆಗೆ ಕಾರಣಗಳೇನು ಎಂಬುದರ ಕುರಿತು ವರದಿ ನೀಡುವಂತೆ ಸೂಚಿಸಿದ್ದೇನೆ. … Continue reading ನಾಗಮಂಗಲ ಗಲಭೆ : ಕರ್ತವ್ಯ ನಿರ್ಲಕ್ಷ್ಯದ ಆರೋಪದಲ್ಲಿ ಇನ್ಸ್‌ಪೆಕ್ಟರ್‌ ಅಶೋಕ್‌ ಕುಮಾರ್‌ ಅಮಾನತು