ನಾಗಮಂಗಲ ಗಲಭೆ : ಅನಗತ್ಯವಾಗಿ ಪ್ರಚೋದನಾಕಾರಿ ಹೇಳಿಕೆ ನೀಡದಂತೆ ಸಚಿವ ಚೆಲುವರಾಯಸ್ವಾಮಿ ಮನವಿ

ಮಂಡ್ಯ,ಸೆ.12- ನಾಗಮಂಗಲದ ಗಣೇಶನ ಗಲಭೆ ಪ್ರಕರಣದಲ್ಲಿ ಅನಗತ್ಯವಾಗಿ ಪ್ರಚೋದನಾಕಾರಿ ಹೇಳಿಕೆ ನೀಡದೇ ಪರಿಸ್ಥಿತಿ ತಿಳಿಗೊಳ್ಳಲು ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚೆಲುವರಾಯಸ್ವಾಮಿ ಮನವಿ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಪ್ರವಾಸದಲ್ಲಿದ್ದು ನಿನ್ನೆ ಸಂಜೆಯಷ್ಟೇ ವಿಮಾನದಲ್ಲಿ ಬಂದಿಳಿದೆ. ಈ ನಡುವೆ ನಾಗಮಂಗಲದಲ್ಲಿ ಗಲಭೆ ಸಂಭವಿಸಿದೆ ಎಂದು ಮಾಹಿತಿ ತಿಳಿಯಿತು. ತಕ್ಷಣವೇ ಎಸ್ಪಿ, ಐಜಿಪಿ, ಎಡಿಜಿಪಿ ಅವರಿಗೆ ಕರೆ ಮಾಡಿ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದೆ. ಸ್ಥಳೀಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಗಣಪತಿ ಮೂರ್ತಿಯ … Continue reading ನಾಗಮಂಗಲ ಗಲಭೆ : ಅನಗತ್ಯವಾಗಿ ಪ್ರಚೋದನಾಕಾರಿ ಹೇಳಿಕೆ ನೀಡದಂತೆ ಸಚಿವ ಚೆಲುವರಾಯಸ್ವಾಮಿ ಮನವಿ