ನಾರ್ಸಿಸಿಸ್ಟ್ ಸರ್ಕಾರದ ಪ್ರತಿ ಪ್ರಯತ್ನವನ್ನು ವಿರೋಧಿಸುತ್ತೇವೆ : ಸೋನಿಯಾ ಗಾಂಧಿ

Social Share

ನವದೆಹಲಿ,ಆ.15- ತನ್ನ ರಾಜಕೀಯ ಪ್ರಚಾರವನ್ನು ಹೆಚ್ಚಿಸಿಕೊಳ್ಳಲು ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರನ್ನು ಕೆಣಕಲು ಬಿಜೆಪಿ ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

75ನೇ ವರ್ಷದ ಸ್ವಾತಂತ್ರ್ಯ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಭಾರತೀಯ ಪಡೆಗಳು ಮಾಡಿದ ತ್ಯಾಗವನ್ನು ಕುಗ್ಗಿಸಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಐತಿಹಾಸಿಕ ಸತ್ಯಗಳನ್ನು ಸುಳ್ಳು ಮಾಡಲು ಮತ್ತು ಗಾಂಧಿ-ನೆಹರು-ಆಜಾದ್-ಪಟೇಲ್ ಅವರಂತಹ ನಾಯಕರನ್ನು ಸುಳ್ಳಾಗಿಸಲು ಈ ನಾರ್ಸಿಸಿಸ್ಟ್ ಸರ್ಕಾರದ ಪ್ರತಿಯೊಂದು ಪ್ರಯತ್ನವನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದು ಹೇಳಿದ್ದಾರೆ.

ಭಾರತದ ದೂರದೃಷ್ಟಿಯ ನಾಯಕರು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯ ಅಡಿಪಾಯವನ್ನು ಹಾಕಿದರು. ಅವರು ಬಲವಾದ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಸಂಸ್ಥೆಗಳಿಗೆ ನಿಬಂಧನೆಗಳನ್ನು ಮಾಡಿದರು ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ಮರಿಸಿದ್ದಾರೆ.

ಭಾರತದ 76ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕೆ ಶುಭ ಹಾರೈಸಿದ ಕಳೆದ 75 ವರ್ಷಗಳಲ್ಲಿ, ಹೆಚ್ಚು ಪ್ರತಿಭಾವಂತ ಭಾರತೀಯರು ದೇಶವನ್ನು ವಿಜ್ಞಾನ, ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ಕ್ಷೇತ್ರಗಳಲ್ಲಿ ಪ್ರಗತಿಯ ಹಾದಿಯಲ್ಲಿ ಮುನ್ನಡೆಸಿದ್ದಾರೆ. ಭಾರತವು ತನ್ನ ವೈವಿಧ್ಯಮಯ ಸಂಸ್ಕೃತಿಗಳು ಮತ್ತು ಭಾಷೆಗಳ ಮೂಲಕ ವೈಭವಯುತ ರಾಷ್ಟ್ರವಾಗಿ ತನ್ನ ಇಮೇಜ್‍ನ್ನು ಭದ್ರಪಡಿಸಿಕೊಂಡಿದೆ ಎಂದು ಹೇಳಿದ್ದಾರೆ.

Articles You Might Like

Share This Article