ನವದೆಹಲಿ, ಫೆ.1- ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 2026-27ನೇ ಸಾಲಿನ ಕೇಂದ್ರ ಬಜೆಟ್ ಭಾಷಣದಲ್ಲಿ ಮೂರು ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳನ್ನು ಸ್ಥಾಪಿಸುವ ಪ್ರಸ್ತಾಪವನ್ನು ಮಂಡಿಸಿದರು. ಈ ಸಂಸ್ಥೆಗಳು ದೇಶಾದ್ಯಂತ ಸಂಶೋಧನೆ, ಶಿಕ್ಷಣ ಮತ್ತು ಆರೋಗ್ಯ ರಕ್ಷಣಾ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ ಎಂದು ಅವರು ತಿಳಿಸಿದ್ದಾರೆ.
ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಘೋಷಣೆಗಳ ಸರಣಿಯಲ್ಲಿ, ಗುಜರಾತ್ನ ಜಾಮ್ನಗರದಲ್ಲಿರುವ ಆಯುಷ್ ಔಷಧಾಲಯಗಳು ಮತ್ತು ಔಷಧ ಪರೀಕ್ಷಾ ಪ್ರಯೋಗಾಲಯಗಳು, (ವಿಶ್ವ ಆರೋಗ್ಯ ಸಂಸ್ಥೆ) ಸಾಂಪ್ರದಾಯಿಕ ಔಷಧ ಕೇಂದ್ರವನ್ನು ಕೇಂದ್ರವು ನವೀಕರಿಸಲಿದೆ ಎಂದು ಸಚಿವರು ಹೇಳಿದರು.
ಪ್ರಮುಖ ಕೈಗಾರಿಕಾ ಲಾಜಿಸ್ಟಿಕ್್ಸ ಕೇಂದ್ರಗಳ ಸುತ್ತಮುತ್ತಲಿನ ಐದು ವಿಶ್ವವಿದ್ಯಾಲಯ ಪಟ್ಟಣಗಳನ್ನು ಸರ್ಕಾರ ಬೆಂಬಲಿಸುತ್ತದೆ ಎಂದು ಸೀತಾರಾಮನ್ ಘೋಷಿಸಿದರು.
ಪಶುವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ ಸಾಲ-ಸಂಬಂಧಿತ ಬಂಡವಾಳ ಸಬ್ಸಿಡಿ ಬೆಂಬಲ ಯೋಜನೆಯನ್ನು ಸಹ ಅವರು ಪ್ರಸ್ತಾಪಿಸಿದರು.
