Saturday, May 31, 2025
Homeರಾಷ್ಟ್ರೀಯ | Nationalಜಾರ್ಖಂಡ್‌ನ ಲತೇಹಾರ್‌ ಜಿಲ್ಲೆಯಲ್ಲಿ ಗುಂಡಿನ ಚಕಮಕಿ, ಮೋಸ್ಟ್ ವಾಂಟೆಡ್ ನಕ್ಸಲನ ಹತ್ಯೆ

ಜಾರ್ಖಂಡ್‌ನ ಲತೇಹಾರ್‌ ಜಿಲ್ಲೆಯಲ್ಲಿ ಗುಂಡಿನ ಚಕಮಕಿ, ಮೋಸ್ಟ್ ವಾಂಟೆಡ್ ನಕ್ಸಲನ ಹತ್ಯೆ

Naxal carrying Rs 5 lakh bounty killed in gunfight in Jharkhand's Latehar

ಲತೇಹಾರ್‌ , ಮೇ 26- (ಪಿಟಿಐ) ಜಾರ್ಖಂಡ್‌ನ ಲತೇಹಾರ್‌ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ತನ್ನ ತಲೆಗೆ 5 ಲಕ್ಷ ರೂ. ಬಹುಮಾನ ಹೊಂದಿದ್ದ ನಿಷೇಧಿತ ಸಿಪಿಐ (ಮಾವೋವಾದಿ) ಸದಸ್ಯನೊಬ್ಬ ಸಾವನ್ನಪ್ಪಿದ್ದಾನೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ ಮತ್ತೊಬ್ಬ ಕೆಂಪು ಬಂಡುಕೋರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಮೌಹಾದಂದ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯ ದೌನಾದಲ್ಲಿನ ಕಾಡಿನಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದರು.

ಮನೀಶ್‌ ಯಾದವ್‌ ಹತನಾದ ಕೆಂಪು ಉಗ್ರನಾಗಿದ್ದು ಈತನ ತಲೆಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಮತ್ತೊಬ್ಬ ಮಾವೋವಾದಿ ಕುಂದನ್‌ ಖೇರ್ವಾರ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ಪಲಮು ಡಿಐಜಿ ವೈಎಸ್‌‍ ರಮೇಶ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿದಂತೆ ಇಬ್ಬರು ಮಾವೋವಾದಿಗಳು ಸಾವನ್ನಪ್ಪಿದರು. ಲೊಹರ್ದಾಗ, ಗುಮ್ಲಾ, ಛತ್ರ, ಪಲಮು ಮತ್ತು ಲತೇಹರ್‌ ನಂತಹ ಹಲವಾರು ಜಿಲ್ಲೆಗಳಲ್ಲಿ ಕೊಲೆ, ಸುಲಿಗೆ ಮತ್ತು ಬೆಂಕಿ ಹಚ್ಚುವಿಕೆ ಸೇರಿದಂತೆ 98 ಪ್ರಕರಣಗಳಲ್ಲಿ ಲೋಹ್ರಾ ಬೇಕಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News