ಶ್ರೀನಗರ,ಏ.23- ಜಮು ಮತ್ತು ಕಾಶೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹರಿಯಾಣದ ಕರ್ನಾಲ್ನ 26 ವರ್ಷದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ದುರಂತ ಸಾವನ್ನಪ್ಪಿದ್ದಾರೆ.
ನರ್ವಾಲ್ ಇತ್ತೀಚೆಗೆ ವಿವಾಹವಾಗಿದ್ದು ರಜೆಗಾಗಿ ಕಾಶೀರಕ್ಕೆ ತೆರಳಿದ್ದರು. ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದ ವಿನಯ್ ಏಪ್ರಿಲ್ 16 ರಂದು ವಿವಾಹವಾಗಿದ್ದರು. ನಂತರ ಅಲ್ಪ ರಜೆಗಾಗಿ ಕಾಶೀರಕ್ಕೆ ಪ್ರಯಾಣ ಬೆಳೆಸಿದ್ದರು ಎಂದು ರಕ್ಷಣಾ ಅಧಿಕಾರಿಗಳು ದೃಢಪಡಿಸಿದ್ದಾರೆ. ಅವರ ವಿವಾಹ ಆರತಕ್ಷತೆ ಏಪ್ರಿಲ್ 19 ರಂದು ನಡೆಯಿತು. ಮೂಲಗಳ ಪ್ರಕಾರ ನವ ದಂಪತಿಗಳು ಪಹಲ್ಗಾಮ್ನಲ್ಲಿ ಹನಿಮೂನ್ಗೆ ತೆರಳಿದ್ದರು ಎನ್ನಲಾಗಿದೆ.
ನರ್ವಾಲ್ ಕೇವಲ ಎರಡು ವರ್ಷಗಳ ಹಿಂದೆ ನೌಕಾಪಡೆಗೆ ಸೇರಿದ್ದರು ಮತ್ತು ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದರು. ಅವರ ಸಾವು ಅವರ ಕುಟುಂಬಕ್ಕೆ ಆಘಾತ ಬಡಿದಂತಾಗಿದೆ. ಅವರು ನಾಲ್ಕು ದಿನಗಳ ಹಿಂದೆ ವಿವಾಹವಾಗಿದ್ದರು. ಎಲ್ಲರೂ ಸಂತೋಷವಾಗಿದ್ದರು. ಅವರನ್ನು ಭಯೋತ್ಪಾದಕರು ಕೊಂದಿದ್ದಾರೆ, ಅವರು ಸ್ಥಳದಲ್ಲೇ ನಿಧನರಾದರು ಎಂಬ ಮಾಹಿತಿ ನಮಗೆ ಬಂದಿದೆ ಎಂದು ಹೇಳಿದ್ದಾರೆ.
ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಈ ಘಟನೆಯು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಲವಾರು ರಾಜಕೀಯ ನಾಯಕರು ದಾಳಿಯನ್ನು ಖಂಡಿಸಿದ್ದಾರೆ. ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ವಿರೋಧಿಸಿ ಜಮು ಮತ್ತು ಕಾಶೀರದ ನಿವಾಸಿಗಳು ರಾಜ್ಯದ ಹಲವಾರು ಸ್ಥಳಗಳಲ್ಲಿ ಮೇಣದಬತ್ತಿ ಮೆರವಣಿಗೆ ನಡೆಸಿದರು.
ಗುಪ್ತಚರ ಇಲಾಖೆ ಅಧಿಕಾರಿಯೂ ಬಲಿ..!
ಹೈದರಾಬಾದ್ ,ಏ.23- ಜಮುಕಾಶೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಕೃತ್ಯಕ್ಕೆ ಗುಪ್ತಚರ ಇಲಾಖೆಯ(ಐಬಿ) ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಕಾಶೀರ ಪ್ರವಾಸದಲ್ಲಿದ್ದ ಬಿಹಾರ ಮೂಲದ ಮನೀಶ್ ರಂಜನ್ ಅವರನ್ನು ಅವರ ಪತ್ನಿ ಮತ್ತು ಮಕ್ಕಳೆದುರೇ ಗುಂಡಿಟ್ಟು ಕೊಂದು ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಮನೀಶ್ ಅವರು ಹೈದರಾ ಬಾದ್ನ ಐಬಿಯ ಸಚಿವಾ ಲಯ ವಿಭಾಗ ದಲ್ಲಿ ಕಾರ್ಯ ನಿರ್ವಹಿಸುತ್ತಿ ದ್ದರು. ಅವರ ಕುಟುಂಬದ ಜತೆ ಎಲ್ಟಿಸಿ ಪ್ರವಾಸದಲ್ಲಿದ್ದರು. ಇತರ ಹಲವು ಪ್ರವಾಸಿಗಳ ಜತೆ ಮನೀಶ್ ಕುಟುಂಬ ಕೂಡಾ ಮಿನಿ ಸ್ವಿಡ್ಜರ್ ಲೆಂಡ್ ಎನಿಸಿದ ಪಹಲ್ಗಾಂವ್ನ ಬೈಸರನ್ ಕಣಿವೆಯಲ್ಲಿ ವಿಹಾರದಲ್ಲಿದ್ದ ಸಂದರ್ಭದಲ್ಲಿ ಉಗ್ರರು ಈ ದಾಳಿ ನಡೆಸಿದ್ದಾರೆ.
ಈ ಭಯಾನಕ ದಾಳಿಯಿಂದ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡ ಮಹಾರಾಷ್ಟ್ರದ ನಾಗ್ಪುರದ ಕುಟುಂಬವೊಂದು ತಮ ಅನುಭವ ಹಂಚಿಕೊಂಡಿದೆ. ಕೇವಲ 20 ನಿಮಿಷ ಅಂತರದಲ್ಲಿ ಅವರು ದಾಳಿಯಿಂದ ಪಾರಾಗಿದ್ದರು. ದಾಳಿ ನಡೆಯುವ 20 ನಿಮಿಷ ಮುನ್ನ ಅವರು ಪಹಲ್ಗಾಂವ್ ಬಿಟ್ಟಿದ್ದರು. ಸುದೀರ್ಘ ಕಾಲ ಗುಂಡು ಹಾರಿಸುವ ಸದ್ದು ಕೇಳಿಸಿತು. ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರತಿಯೊಬ್ಬರೂ ಪ್ರಯತ್ನಿಸಿದರು. ನಾವು 20 ನಿಮಿಷ ಮೊದಲಷ್ಟೇ ಅಲ್ಲಿಂದ ಹೊರಟಿದ್ದೆವು ಎಂದು ವಿವರಿಸಿದರು. ಈ ದಾಳಿಯ ವಿಚಾರ ತಿಳಿದು ಆಘಾತಕ್ಕೊಳಗಾಗಿರುವ ಸಿಎಂ ರೇವಂತ್ ರೆಡ್ಡಿ, ಘಟನೆಯನ್ನು ತೀವ್ರವಾಗಿ ಖಂಡಿಸಿ ಇದು ರಣಹೇಡಿಗಳ ಕೃತ್ಯವೆಂದು ಹೇಳಿದ್ದಾರೆ. ಅಲ್ಲದೆ ಭಯೋತ್ಪಾದನೆ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅಧಿಕಾರಿ ಮನೀಶ್ ರಂಜನ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಉಗ್ರರ ಅಟ್ಟಹಾಸವನ್ನು ತೀವ್ರವಾಗಿ ಖಂಡಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಇದು ಅವಿವೇಕಿತನದ ಹಿಂಸೆ ಎಂದು ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ, ಈ ಕೃತ್ಯಕ್ಕೆ ಬಲಿಯಾದವರ ಕುಟುಂಬಗಳಿಗೆ ಧೈರ್ಯ ತುಂಬಿದ್ದಾರೆ. ಈ ಘಟನೆಯಿಂದ ತೀವ್ರ ದುಃಖಿತನಾಗಿದ್ದು, ತಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸುವುದಾಗಿ ಸಾಮಾಜಿಕ ಜಾಲತಾಣ ಎಕ್್ಸ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಡಿಸಿಎಂ ಖಂಡನೆ: ಉಗ್ರರ ದುಷ್ಕೃತ್ಯವನ್ನು ಖಂಡಿಸಿರುವ ಡಿಸಿಎಂ ಪವನ್ ಕಲ್ಯಾಣ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ನಿರಂತರ ಕ್ರಮಗಳಿಂದ ಜಮು ಕಾಶೀರದಲ್ಲಿ ಭಯೋತ್ಪಾದನೆ ನಿಯಂತ್ರಣಕ್ಕೆ ಬಂದಿದ್ದರೂ ಸಹ ಇನ್ನೂ ಕೆಲವೆಡೆ ಹೀನ ಮನಸ್ಥಿತಿಯ ಉಗ್ರರು ಇರುವುದು ಇದರಿಂದ ಗೊತ್ತಾಗಿದೆ.
27 ಪ್ರವಾಸಿಗರು ಸಾವನ್ನಪ್ಪಿದ್ದರೆ, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರ ಆತಕ್ಕೆ ಶಾಂತಿ ಕೋರುತ್ತೇನೆ ಮತ್ತು ನೊಂದಿರುವ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ ಎಂದು ಅವರು ಎಕ್್ಸನಲ್ಲಿ ತಿಳಿಸಿದ್ದಾರೆ.ಬಿಆರ್ಎಸ್್ ಪಕ್ಷದ ಕಾರ್ಯದರ್ಶಿ ಕೆ ಟಿ ರಾಮರಾವ್ ಪ್ರತಿಕ್ರಿಯಿಸಿ, ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸುವಂತೆ ಕೇಂದ್ರ ಸರಕಾರಕ್ಕೆ ಒತ್ತಾಯಿಸುತ್ತೇನೆ ಎಂದಿದ್ದಾರೆ.ನಿನ್ನೆ ನಡೆದ ಈ ಉಗ್ರ ಕೃತ್ಯದಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್್ಸ ಫ್ರಂಟ್ (ಟಿಆರ್ಎಫ್) ಈ ದಾಳಿಯ ಹೊಣೆಹೊತ್ತಿದೆ.