ಸಿದ್ದರಾಮಯ್ಯ ಅಭಿಯೋಜನೆ : ಮುಂದಿನ ಯುದ್ಧ ಹೈಕೋರ್ಟ್‌ನಲ್ಲಿ ಎಂದ ಟಿ.ಜೆ.ಅಬ್ರಹಾಂ

ಬೆಂಗಳೂರು,ಆ.17- ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದರಿಂದ ಮುಂದಿನ ಯುದ್ಧ ಹೈಕೋರ್ಟ್‌ನಲ್ಲಿ ನಡೆಯಲಿದೆ ಎಂದು ದೂರುದಾರ ಟಿ.ಜೆ.ಅಬ್ರಹಾಂ ತಿಳಿಸಿದ್ದಾರೆ.ಈ ಸಂಜೆಯೊಂದಿಗೆ ಮಾತನಾಡಿದ ಅವರು, ಅನುಮತಿ ನೀಡಿರುವುದನ್ನು ಮುಖ್ಯಮಂತ್ರಿಯವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಿದ್ದಾರೆ. ಅನುಮತಿ ಏಕೆ ಕೊಡಬಾರದು ಎಂದು ನಾನು ವಾದಿಸಲಿದ್ದೇನೆ. ಹೀಗಾಗಿ ಮುಂದಿನ ಯುದ್ಧ ಹೈಕೋರ್ಟ್‌ನಲ್ಲಿ ನಡೆಯಲಿದೆ ಎಂದು ತಿಳಿಸಿದರು. ನಾನು ಈಗಾಗಲೇ ಜನಪ್ರತಿನಿಧಿಗಳ ನ್ಯಾಯಾಲಯ ಸಂಖ್ಯೆ 82ರಲ್ಲಿ ಪ್ರಕರಣ ದಾಖಲಿಸಿದ್ದೇನೆ. ಅದರ ವಿಚಾರಣೆ ಈ ತಿಂಗಳ 21ರಂದು ನಡೆಯಲಿದ್ದು, ರಾಜ್ಯಪಾಲರು … Continue reading ಸಿದ್ದರಾಮಯ್ಯ ಅಭಿಯೋಜನೆ : ಮುಂದಿನ ಯುದ್ಧ ಹೈಕೋರ್ಟ್‌ನಲ್ಲಿ ಎಂದ ಟಿ.ಜೆ.ಅಬ್ರಹಾಂ