ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ : ಐವರು ಶಂಕಿತರು ಎನ್‍ಐಎ ವಶಕ್ಕೆ

ನವದೆಹಲಿ,ಮಾ.5- ಕರ್ನಾಟಕದ ರಾಜಧಾನಿ ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ತಮಿಳುನಾಡಿನಲ್ಲಿ ಐವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ. ಕಳೆದ ರಾತ್ರಿ ಚೆನ್ನೈನ ಸಾಯಿದಾಪೇಟೆಯಲ್ಲಿ ದಿಢೀರ್ ದಾಳಿ ನಡೆಸಿದ ಎನ್‍ಐಎ ಅಧಿಕಾರಿಗಳ ತಂಡ, ಐವರು ಶಂಕಿತರನ್ನು ವಶಕ್ಕೆ ಪಡೆದು ರಹಸ್ಯ ಸ್ಥಳವೊಂದರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಚೆನ್ನೈನ ಮನ್ನಾಡಿ, ಮುಥಿಯಾಲ್ ಪೇಟ್ಟೈನಲ್ಲಿ ಇಂದು ಬೆಳಗ್ಗೆ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿತ್ತು. ಆರಂಭದಲ್ಲಿ ಮೂವರು, ನಂತರ ಐವರನ್ನು ವಶಕ್ಕೆ … Continue reading ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ : ಐವರು ಶಂಕಿತರು ಎನ್‍ಐಎ ವಶಕ್ಕೆ