ಭಾರತಕ್ಕೆ ಪ್ರವೇಶಿಸಿದ ನಿಫಾ ವೈರಸ್, ರಾಜ್ಯದಲ್ಲಿ ಹೈ ಅಲರ್ಟ್

ಬೆಂಗಳೂರು,ಸೆ.16– ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾ ವೈರಸ್ಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ನಗರದಲ್ಲಿರುವ ಹೊರ ರಾಜ್ಯದ ವಿದ್ಯಾರ್ಥಿಗಳ ಮೇಲೆ ಹದ್ದಿನಕಣ್ಣಿಟ್ಟಿದ್ದು ಹೊರ ಊರಿನಿಂದ ಬರುವ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲು ತೀರ್ಮಾನಿಸಲಾಗಿದೆ. ಅದರಲ್ಲೂ ವಿಮಾನ ನಿಲ್ದಾಣ, ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ರಾಜ್ಯದಿಂದ ಹೊರ ಹೋಗುವ ಹಾಗೂ ಒಳಬರುವ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಕೇರಳದ ಮಲ್ಲಪ್ಪುರಂ ಜಿಲ್ಲೆಯ ನಿಲಂಬೂರು ಗ್ರಾಮದ 23 ವಿದ್ಯಾರ್ಥಿ ಬೆಂಗಳೂರಿನ ಖಾಸಗಿ … Continue reading ಭಾರತಕ್ಕೆ ಪ್ರವೇಶಿಸಿದ ನಿಫಾ ವೈರಸ್, ರಾಜ್ಯದಲ್ಲಿ ಹೈ ಅಲರ್ಟ್