ನವದೆಹಲಿ, ಫೆ 1 (ಪಿಟಿಐ) ಲೋಕಸಭೆಯಲ್ಲಿ ತಮ್ಮ ದಾಖಲೆಯ ಎಂಟನೇ ಬಜೆಟ್ ಮಂಡಿಸುವ ಮುನ್ನ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.ಸ್ಥಾಪಿತ ಸಂಪ್ರದಾಯದ ಪ್ರಕಾರ, ಹಣಕಾಸು ಸಚಿವರು ಸಂಸತ್ತಿಗೆ ತೆರಳುವ ಮೊದಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳನ್ನು ಭೇಟಿ ಮಾಡುವುದು ವಾಡಿಕೆಯಾಗಿದೆ.
ಮುರ್ಮು ಅವರು ಕೇಂದ್ರ ಬಜೆಟ್ ಮಂಡಿಸಲು ಸಂಸತ್ತಿಗೆ ತೆರಳುವ ಮುನ್ನ ಸೀತಾರಾಮನ್ ಅವರಿಗೆ ಮಂಗಳಕರವೆಂದು ಪರಿಗಣಿಸಲಾದ ದಹಿ-ಚಿನಿ (ಮೊಸರು-ಸಕ್ಕರೆ) ನೀಡಿದರು.
ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಕೇಂದ್ರ ಬಜೆಟ್ ಮಂಡಿಸುವ ಮೊದಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು. ರಾಷ್ಟ್ರಪತಿಗಳು ಶುಭ ಹಾರೈಸಿದರು. ಬಜೆಟ್ ಮಂಡನೆಗಾಗಿ ಕೇಂದ್ರ ಹಣಕಾಸು ಸಚಿವರು ಮತ್ತು ಅವರ ತಂಡ ಎಂದು ಅಧ್ಯಕ್ಷರ ಕಚೇರಿ ಎಕ್್ಸನಲ್ಲಿನ ಪೋಸ್ಟ್ನಲ್ಲಿ ತಿಳಿಸಿದೆ.
ಸಂಸತ್ತಿನಲ್ಲಿ ನಿಜವಾದ ಮಂಡನೆಗೆ ಮೊದಲು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತತ್ವದ ಕ್ಯಾಬಿನೆಟ್ 2025-26 ರ ಹಣಕಾಸು ವರ್ಷದ (ಏಪ್ರಿಲ್ 2025 ರಿಂದ ಮಾರ್ಚ್ 2026 ರವರೆಗೆ) ಬಜೆಟ್ ಅನ್ನು ಅನುಮೋದಿಸಿತು.
2047 ರ ವೇಳೆಗೆ ಭಾರತವನ್ನು ವಿಕಸಿತ್ ಭಾರತ್ ಮಾಡುವ ಮಾರ್ಗಸೂಚಿಯನ್ನು ವಿವರಿಸುವಾಗ ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ. 6.4 ಕ್ಕೆ ನಿಧಾನವಾಗುವ ನಿರೀಕ್ಷೆಯಿರುವ ಆರ್ಥಿಕತೆಯನ್ನು ಹೆಚ್ಚಿಸಲು ಮೋದಿ ಸರ್ಕಾರದ ಕ್ರಮಗಳ ಒಂದು ನೋಟವನ್ನು ಬಜೆಟ್ ನೀಡುತ್ತದೆ.